Advertisement
Categories: Uncategorized

ಪುಣ್ಚಪ್ಪಾಡಿ ಶಾಲೆಯ ಪುಸ್ತಕ ಜೋಳಿಗೆಗೆ ಬಂತು 15 ಸಾವಿರ ಮೌಲ್ಯದ ಪುಸ್ತಕ…!

Share

ಸವಣೂರು: ಶಾಲಾ ಆರಂಭೋತ್ಸವಕ್ಕೆ ಮಾಡಿದ ಪುಸ್ತಕ ಜೋಳಿಗೆಗೆ ಅನೇಕ ಪುಸ್ತಕಗಳು ಬಂದು ತುಂಬಿದವು.ಸಂಜೆಯ ವೇಳೆ 15 ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಬಂದು ತುಂಬಿತು.

ಶಾಲೆಗೆ ಸೇರ್ಪಡೆಗೊಂಡ ಮಕ್ಕಳು ಈ ವಿಶಿಷ್ಟವಾದ ಜೋಳಿಗೆಗೆ ಪುಸ್ತಕವನ್ನು ತುಂಬಿಸಿ, ಪುಸ್ತಕಕ್ಕೆ ನಮಸ್ಕರಿಸಿ ಶಾಲೆಗೆ ಸೇರ್ಪಡೆಗೊಂಡರು. ಮಕ್ಕಳು, ಊರವರು, ಪೋಷಕರು, ಹೆತ್ತವರು ದಾನಿಗಳು, ಪುಸ್ತಕ ಪ್ರಿಯರು ಎಲ್ಲರೂ ಈ ಜೋಳಿಗೆಗೆ ಪುಸ್ತಕ ತುಂಬಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಹೊಸದಾಗಿ ದಾಖಲಾಗುವ ಮಕ್ಕಳನ್ನು ಶಾಲೆಯ ಗೇಟಿನ ಬಳಿಯಿಂದ ಆರತಿ ಬೆಳಗಿ, ಶಾಲೆಯ ಬ್ಯಾಡ್ಜ್ ನೀಡಿ ಶಾಲೆಗೆ ಸ್ವಾಗತಿಸಲಾಯಿತು.

ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ  ಸಾಹಿತಿ  ಪುರಂದರ ಭಟ್ ಬಿ.  ಅಂಕಣಕಾರ, ಹಿರಿಯ ಸಾಹಿತಿ ಪ್ರೊ|ವಿ.ಬಿ. ಅರ್ತಿಕಜೆ, ಕೊಡಂಕಿರಿ ಪ್ರಕಾಶನ ಪುತ್ತೂರಿನ ಪ್ರಕಾಶ್ ಕೊಡಂಕಿರಿ, ಸಾಮಾಜಿಕ ಕಾರ್ಯಕರ್ತ ಲೋಕೇಶ್ ಗೌಡ ಅಲುಂಬುಡ ಮುಂತಾದವರೂ ಈ ಪುಸ್ತಕದ ಜೋಳಿಗೆ ತುಂಬಿಸಿದರು. ಹೀಗೆ ಬರೋಬ್ಬರಿ 15000ಕ್ಕೂ ಅಧಿಕ ಮೌಲ್ಯದ ಪುಸ್ತಕಗಳು ಜೋಳಿಗೆ ತುಂಬಿದವು.

ಕಾರ್ಯಕ್ರಮವನ್ನು ಪುಸ್ತಕ ಜೋಳಿಗೆಗೆ ಮೊದಲ ಪುಸ್ತಕವನ್ನು ತುಂಬುವುದರ ಮೂಲಕ ಉದ್ಘಾಟಿಸಿದ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಬಿ.ಕೆ  ಮಾತನಾಡಿ ಇಂದು ಸರಕಾರಿ ಶಾಲೆಗಳು ಬಹಳ ಚೆನ್ನಾಗಿ ಕಾರ್ಯನಿರ್ವಹಿಸುತ್ತಿವೆ. ಮಕ್ಕಳಿಗೆ ಎಳವೆಯಿಂದಲೇ ಪುಸ್ತಕ ಪ್ರೀತಿಯನ್ನು ಬೆಳೆಸುವ ಈ ಪ್ರಯತ್ನ ವಿಶಿಷ್ಟ. ಪುಣ್ಚಪ್ಪಾಡಿ ಶಾಲೆಯು ತನ್ನ ವಿಶಿಷ್ಟ ಕಾರ್ಯಚಟುವಟಿಕೆಗಳಿಂದ ಈಗಾಗಲೇ ಪ್ರಸಿದ್ಧವಾಗಿದೆ. ಎಲ್ಲಾ ಶಾಲೆಗಳಲ್ಲಿ ಈ ರೀತಿಯ ಆರಂಭೋತ್ಸವವಾಗಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷರಾದ ಉಮಾಶಂಕರ ಗೌಡ ಮಾತನಾಡಿ ಪುಣ್ಚಪ್ಪಾಡಿ ಶಾಲೆಯು ಕಳೆದ ಮೂರು ವರ್ಷಗಳಿಂದ ಶಾಲಾ ಆರಂಭೋತ್ಸವವನ್ನು ವಿಶಿಷ್ಟವಾಗಿ ಆಚರಿಸುತ್ತಾ ಬರುತ್ತಿದೆ. ಈ ವರ್ಷದ ಈ ಪುಸ್ತಕ ಜೋಳಿಗೆ ನಿಜಕ್ಕೂ ಅರ್ಥಪೂರ್ಣವಾದ ಆರಂಭೋತ್ಸವ ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಯತೀಶ್ ಕುಮಾರ್, ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಗಾಯತ್ರಿ ಓಂತಿಮನೆ, ಎಸ್.ಡಿ.ಎಮ್.ಸಿ.ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಊರವರು ಭಾಗವಹಿಸಿದ್ದರು. ಪದವೀಧರ ಶಿಕ್ಷಕರಾದ ಶೋಭಾ ಕೆ. ಸ್ವಾಗತಿಸಿ ಫ್ಲಾವಿಯಾ ವಂದಿಸಿದರು. ಮುಖ್ಯಗುರು ರಶ್ಮಿತಾ ನರಿಮೊಗರು ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

16 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

23 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

23 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago