Advertisement
Categories: Uncategorized

ಪುಣ್ಚಪ್ಪಾಡಿ ಶಾಲೆಯ ಪುಸ್ತಕ ಜೋಳಿಗೆಗೆ ಬಂತು 15 ಸಾವಿರ ಮೌಲ್ಯದ ಪುಸ್ತಕ…!

Share

ಸವಣೂರು: ಶಾಲಾ ಆರಂಭೋತ್ಸವಕ್ಕೆ ಮಾಡಿದ ಪುಸ್ತಕ ಜೋಳಿಗೆಗೆ ಅನೇಕ ಪುಸ್ತಕಗಳು ಬಂದು ತುಂಬಿದವು.ಸಂಜೆಯ ವೇಳೆ 15 ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಬಂದು ತುಂಬಿತು.

ಶಾಲೆಗೆ ಸೇರ್ಪಡೆಗೊಂಡ ಮಕ್ಕಳು ಈ ವಿಶಿಷ್ಟವಾದ ಜೋಳಿಗೆಗೆ ಪುಸ್ತಕವನ್ನು ತುಂಬಿಸಿ, ಪುಸ್ತಕಕ್ಕೆ ನಮಸ್ಕರಿಸಿ ಶಾಲೆಗೆ ಸೇರ್ಪಡೆಗೊಂಡರು. ಮಕ್ಕಳು, ಊರವರು, ಪೋಷಕರು, ಹೆತ್ತವರು ದಾನಿಗಳು, ಪುಸ್ತಕ ಪ್ರಿಯರು ಎಲ್ಲರೂ ಈ ಜೋಳಿಗೆಗೆ ಪುಸ್ತಕ ತುಂಬಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಹೊಸದಾಗಿ ದಾಖಲಾಗುವ ಮಕ್ಕಳನ್ನು ಶಾಲೆಯ ಗೇಟಿನ ಬಳಿಯಿಂದ ಆರತಿ ಬೆಳಗಿ, ಶಾಲೆಯ ಬ್ಯಾಡ್ಜ್ ನೀಡಿ ಶಾಲೆಗೆ ಸ್ವಾಗತಿಸಲಾಯಿತು.

ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ  ಸಾಹಿತಿ  ಪುರಂದರ ಭಟ್ ಬಿ.  ಅಂಕಣಕಾರ, ಹಿರಿಯ ಸಾಹಿತಿ ಪ್ರೊ|ವಿ.ಬಿ. ಅರ್ತಿಕಜೆ, ಕೊಡಂಕಿರಿ ಪ್ರಕಾಶನ ಪುತ್ತೂರಿನ ಪ್ರಕಾಶ್ ಕೊಡಂಕಿರಿ, ಸಾಮಾಜಿಕ ಕಾರ್ಯಕರ್ತ ಲೋಕೇಶ್ ಗೌಡ ಅಲುಂಬುಡ ಮುಂತಾದವರೂ ಈ ಪುಸ್ತಕದ ಜೋಳಿಗೆ ತುಂಬಿಸಿದರು. ಹೀಗೆ ಬರೋಬ್ಬರಿ 15000ಕ್ಕೂ ಅಧಿಕ ಮೌಲ್ಯದ ಪುಸ್ತಕಗಳು ಜೋಳಿಗೆ ತುಂಬಿದವು.

ಕಾರ್ಯಕ್ರಮವನ್ನು ಪುಸ್ತಕ ಜೋಳಿಗೆಗೆ ಮೊದಲ ಪುಸ್ತಕವನ್ನು ತುಂಬುವುದರ ಮೂಲಕ ಉದ್ಘಾಟಿಸಿದ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಬಿ.ಕೆ  ಮಾತನಾಡಿ ಇಂದು ಸರಕಾರಿ ಶಾಲೆಗಳು ಬಹಳ ಚೆನ್ನಾಗಿ ಕಾರ್ಯನಿರ್ವಹಿಸುತ್ತಿವೆ. ಮಕ್ಕಳಿಗೆ ಎಳವೆಯಿಂದಲೇ ಪುಸ್ತಕ ಪ್ರೀತಿಯನ್ನು ಬೆಳೆಸುವ ಈ ಪ್ರಯತ್ನ ವಿಶಿಷ್ಟ. ಪುಣ್ಚಪ್ಪಾಡಿ ಶಾಲೆಯು ತನ್ನ ವಿಶಿಷ್ಟ ಕಾರ್ಯಚಟುವಟಿಕೆಗಳಿಂದ ಈಗಾಗಲೇ ಪ್ರಸಿದ್ಧವಾಗಿದೆ. ಎಲ್ಲಾ ಶಾಲೆಗಳಲ್ಲಿ ಈ ರೀತಿಯ ಆರಂಭೋತ್ಸವವಾಗಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷರಾದ ಉಮಾಶಂಕರ ಗೌಡ ಮಾತನಾಡಿ ಪುಣ್ಚಪ್ಪಾಡಿ ಶಾಲೆಯು ಕಳೆದ ಮೂರು ವರ್ಷಗಳಿಂದ ಶಾಲಾ ಆರಂಭೋತ್ಸವವನ್ನು ವಿಶಿಷ್ಟವಾಗಿ ಆಚರಿಸುತ್ತಾ ಬರುತ್ತಿದೆ. ಈ ವರ್ಷದ ಈ ಪುಸ್ತಕ ಜೋಳಿಗೆ ನಿಜಕ್ಕೂ ಅರ್ಥಪೂರ್ಣವಾದ ಆರಂಭೋತ್ಸವ ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಯತೀಶ್ ಕುಮಾರ್, ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಗಾಯತ್ರಿ ಓಂತಿಮನೆ, ಎಸ್.ಡಿ.ಎಮ್.ಸಿ.ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಊರವರು ಭಾಗವಹಿಸಿದ್ದರು. ಪದವೀಧರ ಶಿಕ್ಷಕರಾದ ಶೋಭಾ ಕೆ. ಸ್ವಾಗತಿಸಿ ಫ್ಲಾವಿಯಾ ವಂದಿಸಿದರು. ಮುಖ್ಯಗುರು ರಶ್ಮಿತಾ ನರಿಮೊಗರು ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

3 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

4 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

5 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

11 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

17 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago