Advertisement
Categories: Uncategorized

ಪುಣ್ಚಪ್ಪಾಡಿ ಶಾಲೆಯ ಪುಸ್ತಕ ಜೋಳಿಗೆಗೆ ಬಂತು 15 ಸಾವಿರ ಮೌಲ್ಯದ ಪುಸ್ತಕ…!

Share

ಸವಣೂರು: ಶಾಲಾ ಆರಂಭೋತ್ಸವಕ್ಕೆ ಮಾಡಿದ ಪುಸ್ತಕ ಜೋಳಿಗೆಗೆ ಅನೇಕ ಪುಸ್ತಕಗಳು ಬಂದು ತುಂಬಿದವು.ಸಂಜೆಯ ವೇಳೆ 15 ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಬಂದು ತುಂಬಿತು.

ಶಾಲೆಗೆ ಸೇರ್ಪಡೆಗೊಂಡ ಮಕ್ಕಳು ಈ ವಿಶಿಷ್ಟವಾದ ಜೋಳಿಗೆಗೆ ಪುಸ್ತಕವನ್ನು ತುಂಬಿಸಿ, ಪುಸ್ತಕಕ್ಕೆ ನಮಸ್ಕರಿಸಿ ಶಾಲೆಗೆ ಸೇರ್ಪಡೆಗೊಂಡರು. ಮಕ್ಕಳು, ಊರವರು, ಪೋಷಕರು, ಹೆತ್ತವರು ದಾನಿಗಳು, ಪುಸ್ತಕ ಪ್ರಿಯರು ಎಲ್ಲರೂ ಈ ಜೋಳಿಗೆಗೆ ಪುಸ್ತಕ ತುಂಬಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಹೊಸದಾಗಿ ದಾಖಲಾಗುವ ಮಕ್ಕಳನ್ನು ಶಾಲೆಯ ಗೇಟಿನ ಬಳಿಯಿಂದ ಆರತಿ ಬೆಳಗಿ, ಶಾಲೆಯ ಬ್ಯಾಡ್ಜ್ ನೀಡಿ ಶಾಲೆಗೆ ಸ್ವಾಗತಿಸಲಾಯಿತು.

ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ  ಸಾಹಿತಿ  ಪುರಂದರ ಭಟ್ ಬಿ.  ಅಂಕಣಕಾರ, ಹಿರಿಯ ಸಾಹಿತಿ ಪ್ರೊ|ವಿ.ಬಿ. ಅರ್ತಿಕಜೆ, ಕೊಡಂಕಿರಿ ಪ್ರಕಾಶನ ಪುತ್ತೂರಿನ ಪ್ರಕಾಶ್ ಕೊಡಂಕಿರಿ, ಸಾಮಾಜಿಕ ಕಾರ್ಯಕರ್ತ ಲೋಕೇಶ್ ಗೌಡ ಅಲುಂಬುಡ ಮುಂತಾದವರೂ ಈ ಪುಸ್ತಕದ ಜೋಳಿಗೆ ತುಂಬಿಸಿದರು. ಹೀಗೆ ಬರೋಬ್ಬರಿ 15000ಕ್ಕೂ ಅಧಿಕ ಮೌಲ್ಯದ ಪುಸ್ತಕಗಳು ಜೋಳಿಗೆ ತುಂಬಿದವು.

ಕಾರ್ಯಕ್ರಮವನ್ನು ಪುಸ್ತಕ ಜೋಳಿಗೆಗೆ ಮೊದಲ ಪುಸ್ತಕವನ್ನು ತುಂಬುವುದರ ಮೂಲಕ ಉದ್ಘಾಟಿಸಿದ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಬಿ.ಕೆ  ಮಾತನಾಡಿ ಇಂದು ಸರಕಾರಿ ಶಾಲೆಗಳು ಬಹಳ ಚೆನ್ನಾಗಿ ಕಾರ್ಯನಿರ್ವಹಿಸುತ್ತಿವೆ. ಮಕ್ಕಳಿಗೆ ಎಳವೆಯಿಂದಲೇ ಪುಸ್ತಕ ಪ್ರೀತಿಯನ್ನು ಬೆಳೆಸುವ ಈ ಪ್ರಯತ್ನ ವಿಶಿಷ್ಟ. ಪುಣ್ಚಪ್ಪಾಡಿ ಶಾಲೆಯು ತನ್ನ ವಿಶಿಷ್ಟ ಕಾರ್ಯಚಟುವಟಿಕೆಗಳಿಂದ ಈಗಾಗಲೇ ಪ್ರಸಿದ್ಧವಾಗಿದೆ. ಎಲ್ಲಾ ಶಾಲೆಗಳಲ್ಲಿ ಈ ರೀತಿಯ ಆರಂಭೋತ್ಸವವಾಗಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷರಾದ ಉಮಾಶಂಕರ ಗೌಡ ಮಾತನಾಡಿ ಪುಣ್ಚಪ್ಪಾಡಿ ಶಾಲೆಯು ಕಳೆದ ಮೂರು ವರ್ಷಗಳಿಂದ ಶಾಲಾ ಆರಂಭೋತ್ಸವವನ್ನು ವಿಶಿಷ್ಟವಾಗಿ ಆಚರಿಸುತ್ತಾ ಬರುತ್ತಿದೆ. ಈ ವರ್ಷದ ಈ ಪುಸ್ತಕ ಜೋಳಿಗೆ ನಿಜಕ್ಕೂ ಅರ್ಥಪೂರ್ಣವಾದ ಆರಂಭೋತ್ಸವ ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಯತೀಶ್ ಕುಮಾರ್, ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಗಾಯತ್ರಿ ಓಂತಿಮನೆ, ಎಸ್.ಡಿ.ಎಮ್.ಸಿ.ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಊರವರು ಭಾಗವಹಿಸಿದ್ದರು. ಪದವೀಧರ ಶಿಕ್ಷಕರಾದ ಶೋಭಾ ಕೆ. ಸ್ವಾಗತಿಸಿ ಫ್ಲಾವಿಯಾ ವಂದಿಸಿದರು. ಮುಖ್ಯಗುರು ರಶ್ಮಿತಾ ನರಿಮೊಗರು ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago