Advertisement
Categories: Uncategorized

ಪುಣ್ಚಪ್ಪಾಡಿ ಶಾಲೆಯ ಪುಸ್ತಕ ಜೋಳಿಗೆಗೆ ಬಂತು 15 ಸಾವಿರ ಮೌಲ್ಯದ ಪುಸ್ತಕ…!

Share

ಸವಣೂರು: ಶಾಲಾ ಆರಂಭೋತ್ಸವಕ್ಕೆ ಮಾಡಿದ ಪುಸ್ತಕ ಜೋಳಿಗೆಗೆ ಅನೇಕ ಪುಸ್ತಕಗಳು ಬಂದು ತುಂಬಿದವು.ಸಂಜೆಯ ವೇಳೆ 15 ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಬಂದು ತುಂಬಿತು.

Advertisement
Advertisement

ಶಾಲೆಗೆ ಸೇರ್ಪಡೆಗೊಂಡ ಮಕ್ಕಳು ಈ ವಿಶಿಷ್ಟವಾದ ಜೋಳಿಗೆಗೆ ಪುಸ್ತಕವನ್ನು ತುಂಬಿಸಿ, ಪುಸ್ತಕಕ್ಕೆ ನಮಸ್ಕರಿಸಿ ಶಾಲೆಗೆ ಸೇರ್ಪಡೆಗೊಂಡರು. ಮಕ್ಕಳು, ಊರವರು, ಪೋಷಕರು, ಹೆತ್ತವರು ದಾನಿಗಳು, ಪುಸ್ತಕ ಪ್ರಿಯರು ಎಲ್ಲರೂ ಈ ಜೋಳಿಗೆಗೆ ಪುಸ್ತಕ ತುಂಬಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಹೊಸದಾಗಿ ದಾಖಲಾಗುವ ಮಕ್ಕಳನ್ನು ಶಾಲೆಯ ಗೇಟಿನ ಬಳಿಯಿಂದ ಆರತಿ ಬೆಳಗಿ, ಶಾಲೆಯ ಬ್ಯಾಡ್ಜ್ ನೀಡಿ ಶಾಲೆಗೆ ಸ್ವಾಗತಿಸಲಾಯಿತು.

Advertisement

ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ  ಸಾಹಿತಿ  ಪುರಂದರ ಭಟ್ ಬಿ.  ಅಂಕಣಕಾರ, ಹಿರಿಯ ಸಾಹಿತಿ ಪ್ರೊ|ವಿ.ಬಿ. ಅರ್ತಿಕಜೆ, ಕೊಡಂಕಿರಿ ಪ್ರಕಾಶನ ಪುತ್ತೂರಿನ ಪ್ರಕಾಶ್ ಕೊಡಂಕಿರಿ, ಸಾಮಾಜಿಕ ಕಾರ್ಯಕರ್ತ ಲೋಕೇಶ್ ಗೌಡ ಅಲುಂಬುಡ ಮುಂತಾದವರೂ ಈ ಪುಸ್ತಕದ ಜೋಳಿಗೆ ತುಂಬಿಸಿದರು. ಹೀಗೆ ಬರೋಬ್ಬರಿ 15000ಕ್ಕೂ ಅಧಿಕ ಮೌಲ್ಯದ ಪುಸ್ತಕಗಳು ಜೋಳಿಗೆ ತುಂಬಿದವು.

Advertisement

ಕಾರ್ಯಕ್ರಮವನ್ನು ಪುಸ್ತಕ ಜೋಳಿಗೆಗೆ ಮೊದಲ ಪುಸ್ತಕವನ್ನು ತುಂಬುವುದರ ಮೂಲಕ ಉದ್ಘಾಟಿಸಿದ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಬಿ.ಕೆ  ಮಾತನಾಡಿ ಇಂದು ಸರಕಾರಿ ಶಾಲೆಗಳು ಬಹಳ ಚೆನ್ನಾಗಿ ಕಾರ್ಯನಿರ್ವಹಿಸುತ್ತಿವೆ. ಮಕ್ಕಳಿಗೆ ಎಳವೆಯಿಂದಲೇ ಪುಸ್ತಕ ಪ್ರೀತಿಯನ್ನು ಬೆಳೆಸುವ ಈ ಪ್ರಯತ್ನ ವಿಶಿಷ್ಟ. ಪುಣ್ಚಪ್ಪಾಡಿ ಶಾಲೆಯು ತನ್ನ ವಿಶಿಷ್ಟ ಕಾರ್ಯಚಟುವಟಿಕೆಗಳಿಂದ ಈಗಾಗಲೇ ಪ್ರಸಿದ್ಧವಾಗಿದೆ. ಎಲ್ಲಾ ಶಾಲೆಗಳಲ್ಲಿ ಈ ರೀತಿಯ ಆರಂಭೋತ್ಸವವಾಗಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷರಾದ ಉಮಾಶಂಕರ ಗೌಡ ಮಾತನಾಡಿ ಪುಣ್ಚಪ್ಪಾಡಿ ಶಾಲೆಯು ಕಳೆದ ಮೂರು ವರ್ಷಗಳಿಂದ ಶಾಲಾ ಆರಂಭೋತ್ಸವವನ್ನು ವಿಶಿಷ್ಟವಾಗಿ ಆಚರಿಸುತ್ತಾ ಬರುತ್ತಿದೆ. ಈ ವರ್ಷದ ಈ ಪುಸ್ತಕ ಜೋಳಿಗೆ ನಿಜಕ್ಕೂ ಅರ್ಥಪೂರ್ಣವಾದ ಆರಂಭೋತ್ಸವ ಎಂದರು.

ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಯತೀಶ್ ಕುಮಾರ್, ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಗಾಯತ್ರಿ ಓಂತಿಮನೆ, ಎಸ್.ಡಿ.ಎಮ್.ಸಿ.ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಊರವರು ಭಾಗವಹಿಸಿದ್ದರು. ಪದವೀಧರ ಶಿಕ್ಷಕರಾದ ಶೋಭಾ ಕೆ. ಸ್ವಾಗತಿಸಿ ಫ್ಲಾವಿಯಾ ವಂದಿಸಿದರು. ಮುಖ್ಯಗುರು ರಶ್ಮಿತಾ ನರಿಮೊಗರು ಕಾರ್ಯಕ್ರಮ ನಿರ್ವಹಿಸಿದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

4 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

4 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

4 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

4 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

5 hours ago

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?

ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…

5 hours ago