ಸವಣೂರು: ಶ್ರೀಗೌರಿ ಗಣೇಶ ಸೇವಾ ಸಂಘ ಪುಣ್ಚಪ್ಪಾಡಿ, ವಿನಾಯಕನಗರ ನೇರೋಳ್ತಡ್ಕ ಇದರ ವತಿಯಿಂದ ನೂತನವಾಗಿ ಪುಣ್ಚಪ್ಪಾಡಿ ಶ್ರೀ ಗಣೇಶೋತ್ಸವ ಸಮಿತಿ ರಚನೆಯ ಅಂಗವಾಗಿ ಸಭೆ ನಡೆಯಿತು.
ಸಭೆಯಲ್ಲಿ ಗಣೇಶೋತ್ಸವ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಮಹೇಶ್ ಕೆ.ಸವಣೂರು, ಗೌರವಾಧ್ಯಕ್ಷರಾಗಿ ಗಿರಿಶಂಕರ ಸುಲಾಯ, ಕಾರ್ಯದರ್ಶಿಯಾಗಿ ಪ್ರಮೋದ್ ಬೊಳ್ಳಾಜೆ, ಕೋಶಾಧಿಕಾರಿಯಾಗಿ ಯತೀಶ್ ಕುಮಾರ್, ಉಪಾಧ್ಯಕ್ಷರಾಗಿ ವಸಂತ ಗೌಡ ಬೆದ್ರಂಪಾಡಿ ಮತ್ತು ವೇದಾವತಿ ಅಂಜಯ, ಜತೆ ಕಾರ್ಯದರ್ಶಿಯಾಗಿ ನಿತಿನ್ ಬದಿಯಡ್ಕ, ಸಹ ಕೋಶಾಧಿಕಾರಿಯಾಗಿ ಪ್ರತೀಕ್ ಬಿ ಹಾಗೂ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭ ಗೌರಿ ಗಣೇಶ ಸೇವಾ ಸಂಘದ ಗೌರವಾಧ್ಯಕ್ಷ ಹರೀಶ್ ರೈ ಸಾರಕರೆ, ಅಧ್ಯಕ್ಷ ಸಚಿನ್ ಕುಮಾರ್ ಜೈನ್, ಕಾರ್ಯದರ್ಶಿ ಸತೀಶ್ ಪೂಜಾರಿ ನೇರೋಳ್ತಡ್ಕ, ಉಪಾಧ್ಯಕ್ಷ ಬಾಲಕೃಷ್ಣ ರೈ ದೇವಸ್ಯ, ಕೋಶಾಧಿಕಾರಿ ಶೀನಪ್ಪ ಶೆಟ್ಟಿ ನೆಕ್ರಾಜೆ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಮೊದಲಾದವರಿದ್ದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…