ಸವಣೂರು: ಶ್ರೀಗೌರಿ ಗಣೇಶ ಸೇವಾ ಸಂಘ ಪುಣ್ಚಪ್ಪಾಡಿ, ವಿನಾಯಕನಗರ ನೇರೋಳ್ತಡ್ಕ ಇದರ ವತಿಯಿಂದ ನೂತನವಾಗಿ ಪುಣ್ಚಪ್ಪಾಡಿ ಶ್ರೀ ಗಣೇಶೋತ್ಸವ ಸಮಿತಿ ರಚನೆಯ ಅಂಗವಾಗಿ ಸಭೆ ನಡೆಯಿತು.
ಸಭೆಯಲ್ಲಿ ಗಣೇಶೋತ್ಸವ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಮಹೇಶ್ ಕೆ.ಸವಣೂರು, ಗೌರವಾಧ್ಯಕ್ಷರಾಗಿ ಗಿರಿಶಂಕರ ಸುಲಾಯ, ಕಾರ್ಯದರ್ಶಿಯಾಗಿ ಪ್ರಮೋದ್ ಬೊಳ್ಳಾಜೆ, ಕೋಶಾಧಿಕಾರಿಯಾಗಿ ಯತೀಶ್ ಕುಮಾರ್, ಉಪಾಧ್ಯಕ್ಷರಾಗಿ ವಸಂತ ಗೌಡ ಬೆದ್ರಂಪಾಡಿ ಮತ್ತು ವೇದಾವತಿ ಅಂಜಯ, ಜತೆ ಕಾರ್ಯದರ್ಶಿಯಾಗಿ ನಿತಿನ್ ಬದಿಯಡ್ಕ, ಸಹ ಕೋಶಾಧಿಕಾರಿಯಾಗಿ ಪ್ರತೀಕ್ ಬಿ ಹಾಗೂ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭ ಗೌರಿ ಗಣೇಶ ಸೇವಾ ಸಂಘದ ಗೌರವಾಧ್ಯಕ್ಷ ಹರೀಶ್ ರೈ ಸಾರಕರೆ, ಅಧ್ಯಕ್ಷ ಸಚಿನ್ ಕುಮಾರ್ ಜೈನ್, ಕಾರ್ಯದರ್ಶಿ ಸತೀಶ್ ಪೂಜಾರಿ ನೇರೋಳ್ತಡ್ಕ, ಉಪಾಧ್ಯಕ್ಷ ಬಾಲಕೃಷ್ಣ ರೈ ದೇವಸ್ಯ, ಕೋಶಾಧಿಕಾರಿ ಶೀನಪ್ಪ ಶೆಟ್ಟಿ ನೆಕ್ರಾಜೆ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ ಮೊದಲಾದವರಿದ್ದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…