ಪುತ್ತೂರಿಗೆ ಬರಲಿದೆ ಕೃಷಿಗೆ ಪೂರಕವಾಗಿರುವ 600 ಆವಿಷ್ಕಾರಗಳು..!

November 25, 2019
6:04 PM

ಪುತ್ತೂರು: ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ ನಡೆಯುವ ಅಗ್ರಿಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ಸುಮಾರು 600 ರಷ್ಟು ಕೃಷಿ ಪೂರಕ ಸಂಶೋಧನೆಗಳು ಬರುವುದು ಖಚಿತವಾಗಿದೆ. ಇದೆಲ್ಲಾ ಕೃಷಿ ಪೂರಕ ಸಂಶೋಧನೆಗಳು. ಹೀಗಾಗಿ ಈಗ 600 ಕೃಷಿ ಅನ್ವೇಷಣೆಗಳ ಪರಿಚಯವಾಗಲಿದೆ.

Advertisement
Advertisement

ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನ.30 ಹಾಗೂ ಡಿ.1 ರಂದು ನಡೆಸಲಿರುವ ಅಗ್ರಿ ಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ರಾಜ್ಯದ ವಿವಿಧ ಭಾಗದ ಸುಮಾರು 600 ವಿದ್ಯಾರ್ಥಿಗಳು ಹಾಗೂ ಕೃಷಿಕರು ತಮ್ಮ ಮಾದರಿಗಳೊಂದಿಗೆ ಖಚಿತವಾಗಿದೆ.
ಈ ಕೃಷಿ ಪೂರಕ ನವೀನ ಆವಿಷ್ಕಾರಗಳ ರಾಜ್ಯಮಟ್ಟದ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಿಶೇಷವಾಗಿ ಮಧ್ಯಮ ವರ್ಗದ ರೈತರಿಗೆ ಉಪಯೋಗವಾಗುವಂತಹ ವಿದ್ಯುತ್ ರಹಿತ ಅಡಿಕೆ ಸುಲಿಯುವ ಉಪಕರಣ, ತೆಂಗಿನಕಾಯಿ ಸುಲಿಯುವ ಉಪಕರಣವೂ ಪ್ರದರ್ಶನಗೊಳ್ಳಲಿದ್ದು, ಕೃಷಿಕರಿಗೆ ಮುಂದಿನ ದಿನಗಳಲ್ಲಿ ಉಪಯೋಗ ಆಗಲಿದೆ.

ಪ್ರಸ್ತುತ ಅಡಿಕೆಯ ಮೌಲ್ಯವರ್ಧನೆ ಕೃಷಿಕರ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಅಂತಹ ಪ್ರಾತ್ಯಕ್ಷಿಕೆಗಳೂ ಈ ಅನ್ವಾಷಣಾದಲ್ಲಿ ಕಾಣಿಸಿಕೊಳ್ಳಲಿವೆ. ಹಾಗೆಯೇ ಕೃಷಿ ಆಧಾರಿತ ರಾಸಾಯನಿಕ ರಹಿತ ಗೃಹೋಪಯೋಗಿ ವಸ್ತುಗಳು ಕೂಡ ಇಲ್ಲಿ ಇರಲಿವೆ. ಸಮುದಾಯದ ಒಳಗೊಳ್ಳುವಿಕೆ ಹಾಗೂ ಅಭಿವೃದ್ಧಿಯ ಕನಸಿನೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಇದೀಗ ಅನ್ವೇಷಣಾ 2019 ರ ಮೂಲಕ ಮಹತ್ವದ ಹೆಜ್ಜೆ ಇರಿಸಿದೆ.

.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
May 30, 2025
8:31 AM
by: The Rural Mirror ಸುದ್ದಿಜಾಲ
ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?
May 30, 2025
7:59 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ
May 29, 2025
2:42 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group