Advertisement
ಕೃಷಿ

ಪುತ್ತೂರಿಗೆ ಬರಲಿದೆ ಕೃಷಿಗೆ ಪೂರಕವಾಗಿರುವ 600 ಆವಿಷ್ಕಾರಗಳು..!

Share

ಪುತ್ತೂರು: ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ ನಡೆಯುವ ಅಗ್ರಿಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ಸುಮಾರು 600 ರಷ್ಟು ಕೃಷಿ ಪೂರಕ ಸಂಶೋಧನೆಗಳು ಬರುವುದು ಖಚಿತವಾಗಿದೆ. ಇದೆಲ್ಲಾ ಕೃಷಿ ಪೂರಕ ಸಂಶೋಧನೆಗಳು. ಹೀಗಾಗಿ ಈಗ 600 ಕೃಷಿ ಅನ್ವೇಷಣೆಗಳ ಪರಿಚಯವಾಗಲಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನ.30 ಹಾಗೂ ಡಿ.1 ರಂದು ನಡೆಸಲಿರುವ ಅಗ್ರಿ ಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ರಾಜ್ಯದ ವಿವಿಧ ಭಾಗದ ಸುಮಾರು 600 ವಿದ್ಯಾರ್ಥಿಗಳು ಹಾಗೂ ಕೃಷಿಕರು ತಮ್ಮ ಮಾದರಿಗಳೊಂದಿಗೆ ಖಚಿತವಾಗಿದೆ.
ಈ ಕೃಷಿ ಪೂರಕ ನವೀನ ಆವಿಷ್ಕಾರಗಳ ರಾಜ್ಯಮಟ್ಟದ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಿಶೇಷವಾಗಿ ಮಧ್ಯಮ ವರ್ಗದ ರೈತರಿಗೆ ಉಪಯೋಗವಾಗುವಂತಹ ವಿದ್ಯುತ್ ರಹಿತ ಅಡಿಕೆ ಸುಲಿಯುವ ಉಪಕರಣ, ತೆಂಗಿನಕಾಯಿ ಸುಲಿಯುವ ಉಪಕರಣವೂ ಪ್ರದರ್ಶನಗೊಳ್ಳಲಿದ್ದು, ಕೃಷಿಕರಿಗೆ ಮುಂದಿನ ದಿನಗಳಲ್ಲಿ ಉಪಯೋಗ ಆಗಲಿದೆ.

ಪ್ರಸ್ತುತ ಅಡಿಕೆಯ ಮೌಲ್ಯವರ್ಧನೆ ಕೃಷಿಕರ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಅಂತಹ ಪ್ರಾತ್ಯಕ್ಷಿಕೆಗಳೂ ಈ ಅನ್ವಾಷಣಾದಲ್ಲಿ ಕಾಣಿಸಿಕೊಳ್ಳಲಿವೆ. ಹಾಗೆಯೇ ಕೃಷಿ ಆಧಾರಿತ ರಾಸಾಯನಿಕ ರಹಿತ ಗೃಹೋಪಯೋಗಿ ವಸ್ತುಗಳು ಕೂಡ ಇಲ್ಲಿ ಇರಲಿವೆ. ಸಮುದಾಯದ ಒಳಗೊಳ್ಳುವಿಕೆ ಹಾಗೂ ಅಭಿವೃದ್ಧಿಯ ಕನಸಿನೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಇದೀಗ ಅನ್ವೇಷಣಾ 2019 ರ ಮೂಲಕ ಮಹತ್ವದ ಹೆಜ್ಜೆ ಇರಿಸಿದೆ.

.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-06-2026 | ಕರಾವಳಿ, ಮಲೆನಾಡಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಉಳಿದ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ

ರಾಜ್ಯದಲ್ಲಿ ಮುಂಗಾರು ಇನ್ನೂ ದುರ್ಬಲವಾಗಿದ್ದು, ಸುಳ್ಯ, ಕಡಬ ಹಾಗೂ ಸೋಮವಾರಪೇಟೆ ಭಾಗಗಳಲ್ಲಿ ಮಾತ್ರ…

1 hour ago

ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚು | ಕಿತ್ತಳೆ ಬಣ್ಣಕ್ಕೆ ತಿರುಗಿದ ಆಕಾಶ, ಭೀಕರ ಕಾಡ್ಗಿಚ್ಚಿಗೆ 12 ಬಲಿ- ಸ್ಪೇನ್‌ನಲ್ಲಿ ಭಯಾನಕ ದುರಂತ

ದಕ್ಷಿಣ ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…

5 hours ago

ತೀವ್ರ ಬಿಸಿಗೆ ತುತ್ತಾಗುವ ನಗರಗಳಲ್ಲಿ ಭಾರತ ಅಗ್ರಸ್ಥಾನ: ವಿಶ್ವದ ಟಾಪ್-50 ಪಟ್ಟಿಯಲ್ಲಿ 14 ಭಾರತೀಯ ನಗರಗಳು

ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…

5 hours ago

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ

ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…

9 hours ago

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

1 day ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

1 day ago