(ಸಾಂದರ್ಭಿಕ ಚಿತ್ರ)
ಪುತ್ತೂರು: ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ ನಡೆಯುವ ಅಗ್ರಿಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ಸುಮಾರು 600 ರಷ್ಟು ಕೃಷಿ ಪೂರಕ ಸಂಶೋಧನೆಗಳು ಬರುವುದು ಖಚಿತವಾಗಿದೆ. ಇದೆಲ್ಲಾ ಕೃಷಿ ಪೂರಕ ಸಂಶೋಧನೆಗಳು. ಹೀಗಾಗಿ ಈಗ 600 ಕೃಷಿ ಅನ್ವೇಷಣೆಗಳ ಪರಿಚಯವಾಗಲಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನ.30 ಹಾಗೂ ಡಿ.1 ರಂದು ನಡೆಸಲಿರುವ ಅಗ್ರಿ ಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ರಾಜ್ಯದ ವಿವಿಧ ಭಾಗದ ಸುಮಾರು 600 ವಿದ್ಯಾರ್ಥಿಗಳು ಹಾಗೂ ಕೃಷಿಕರು ತಮ್ಮ ಮಾದರಿಗಳೊಂದಿಗೆ ಖಚಿತವಾಗಿದೆ.
ಈ ಕೃಷಿ ಪೂರಕ ನವೀನ ಆವಿಷ್ಕಾರಗಳ ರಾಜ್ಯಮಟ್ಟದ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಿಶೇಷವಾಗಿ ಮಧ್ಯಮ ವರ್ಗದ ರೈತರಿಗೆ ಉಪಯೋಗವಾಗುವಂತಹ ವಿದ್ಯುತ್ ರಹಿತ ಅಡಿಕೆ ಸುಲಿಯುವ ಉಪಕರಣ, ತೆಂಗಿನಕಾಯಿ ಸುಲಿಯುವ ಉಪಕರಣವೂ ಪ್ರದರ್ಶನಗೊಳ್ಳಲಿದ್ದು, ಕೃಷಿಕರಿಗೆ ಮುಂದಿನ ದಿನಗಳಲ್ಲಿ ಉಪಯೋಗ ಆಗಲಿದೆ.
ಪ್ರಸ್ತುತ ಅಡಿಕೆಯ ಮೌಲ್ಯವರ್ಧನೆ ಕೃಷಿಕರ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಅಂತಹ ಪ್ರಾತ್ಯಕ್ಷಿಕೆಗಳೂ ಈ ಅನ್ವಾಷಣಾದಲ್ಲಿ ಕಾಣಿಸಿಕೊಳ್ಳಲಿವೆ. ಹಾಗೆಯೇ ಕೃಷಿ ಆಧಾರಿತ ರಾಸಾಯನಿಕ ರಹಿತ ಗೃಹೋಪಯೋಗಿ ವಸ್ತುಗಳು ಕೂಡ ಇಲ್ಲಿ ಇರಲಿವೆ. ಸಮುದಾಯದ ಒಳಗೊಳ್ಳುವಿಕೆ ಹಾಗೂ ಅಭಿವೃದ್ಧಿಯ ಕನಸಿನೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಇದೀಗ ಅನ್ವೇಷಣಾ 2019 ರ ಮೂಲಕ ಮಹತ್ವದ ಹೆಜ್ಜೆ ಇರಿಸಿದೆ.
.
ರಾಜ್ಯದಲ್ಲಿ ಮುಂಗಾರು ಇನ್ನೂ ದುರ್ಬಲವಾಗಿದ್ದು, ಸುಳ್ಯ, ಕಡಬ ಹಾಗೂ ಸೋಮವಾರಪೇಟೆ ಭಾಗಗಳಲ್ಲಿ ಮಾತ್ರ…
ದಕ್ಷಿಣ ಸ್ಪೇನ್ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…
ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…
ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…