(ಸಾಂದರ್ಭಿಕ ಚಿತ್ರ)
ಪುತ್ತೂರು: ಪುತ್ತೂರಿನ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಠಾರದಲ್ಲಿ ನಡೆಯುವ ಅಗ್ರಿಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ಸುಮಾರು 600 ರಷ್ಟು ಕೃಷಿ ಪೂರಕ ಸಂಶೋಧನೆಗಳು ಬರುವುದು ಖಚಿತವಾಗಿದೆ. ಇದೆಲ್ಲಾ ಕೃಷಿ ಪೂರಕ ಸಂಶೋಧನೆಗಳು. ಹೀಗಾಗಿ ಈಗ 600 ಕೃಷಿ ಅನ್ವೇಷಣೆಗಳ ಪರಿಚಯವಾಗಲಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನ.30 ಹಾಗೂ ಡಿ.1 ರಂದು ನಡೆಸಲಿರುವ ಅಗ್ರಿ ಟಿಂಕರಿಂಗ್ ಫೆಸ್ಟ್ ಅನ್ವೇಷಣಾದಲ್ಲಿ ರಾಜ್ಯದ ವಿವಿಧ ಭಾಗದ ಸುಮಾರು 600 ವಿದ್ಯಾರ್ಥಿಗಳು ಹಾಗೂ ಕೃಷಿಕರು ತಮ್ಮ ಮಾದರಿಗಳೊಂದಿಗೆ ಖಚಿತವಾಗಿದೆ.
ಈ ಕೃಷಿ ಪೂರಕ ನವೀನ ಆವಿಷ್ಕಾರಗಳ ರಾಜ್ಯಮಟ್ಟದ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಿಶೇಷವಾಗಿ ಮಧ್ಯಮ ವರ್ಗದ ರೈತರಿಗೆ ಉಪಯೋಗವಾಗುವಂತಹ ವಿದ್ಯುತ್ ರಹಿತ ಅಡಿಕೆ ಸುಲಿಯುವ ಉಪಕರಣ, ತೆಂಗಿನಕಾಯಿ ಸುಲಿಯುವ ಉಪಕರಣವೂ ಪ್ರದರ್ಶನಗೊಳ್ಳಲಿದ್ದು, ಕೃಷಿಕರಿಗೆ ಮುಂದಿನ ದಿನಗಳಲ್ಲಿ ಉಪಯೋಗ ಆಗಲಿದೆ.
ಪ್ರಸ್ತುತ ಅಡಿಕೆಯ ಮೌಲ್ಯವರ್ಧನೆ ಕೃಷಿಕರ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಅಂತಹ ಪ್ರಾತ್ಯಕ್ಷಿಕೆಗಳೂ ಈ ಅನ್ವಾಷಣಾದಲ್ಲಿ ಕಾಣಿಸಿಕೊಳ್ಳಲಿವೆ. ಹಾಗೆಯೇ ಕೃಷಿ ಆಧಾರಿತ ರಾಸಾಯನಿಕ ರಹಿತ ಗೃಹೋಪಯೋಗಿ ವಸ್ತುಗಳು ಕೂಡ ಇಲ್ಲಿ ಇರಲಿವೆ. ಸಮುದಾಯದ ಒಳಗೊಳ್ಳುವಿಕೆ ಹಾಗೂ ಅಭಿವೃದ್ಧಿಯ ಕನಸಿನೊಂದಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಇದೀಗ ಅನ್ವೇಷಣಾ 2019 ರ ಮೂಲಕ ಮಹತ್ವದ ಹೆಜ್ಜೆ ಇರಿಸಿದೆ.
.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…