ವಿಜಯಕರ್ನಾಟಕ ವತಿಯಿಂದ ಆಯೋಜನೆಗೊಂಡ ಸಮಾವೇಶವನ್ನು ಒಡಿಯೂರು ಶ್ರೀಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ, ಕೃಷಿಕರು ಸಂಘಟಿತರಾಗಬೇಕಾದ ಅನಿವಾರ್ಯತೆ ಇದೆ. ಅಡಿಕೆ ಎನ್ನುವುದು ಕೇವಲ ಕೃಷಿಯಲ್ಲ ಅದೊಂದು ಸಂಸ್ಕೃತಿ. ಅಡಿಕೆ ಉಳಿದರೆ ಮಾತ್ರವೇ ಎಲ್ಲವೂ. ಹೀಗಾಗಿ ಎಲ್ಲರೂ ಒಂದಾಗಿ ಅಡಿಕೆ ಪರವಾಗಿ ಹೋರಾಟ ಮಾಡಬೇಕಿದೆ ಎಂದರು.
ಕ್ಯಾಂಪ್ಕೋ ಅದ್ಯಕ್ಷ ಎಸ್ ಆರ್ ಸತೀಶ್ಚಂದ್ರ ಮಾತನಾಡಿ, ಅಡಿಕೆ ಪರವಾಗಿ ಕ್ಯಾಂಪ್ಕೋ ಕೆಲಸ ಮಾಡಿದೆ. ಮುಂದೆಯೂ ಮಾಡುತ್ತಿದೆ. ಇದೀಗ ಆರ್ ಸಿ ಇ ಪಿ ಗೆ ಸಹಿ ಹಾಕುವ ಮುನ್ನ ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದು ಅಡಿಕೆ ಬೆಳೆಗಾರರಿಗೆ ಯಾವುದೇ ಆತಂಕ ಬೇಡ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಮಾತನಾಡಿ ಅಡಿಕೆ ಧಾರಣೆ ಇದ್ದರೆ ಮಾತ್ರವೇ ಕರಾವಳಿ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ಸರಿಯಾಗಿ ನಡೆಯಲು ಸಾದ್ಯ. ಇದೀಗ ಮುಕ್ತ ವ್ಯಾಪಾರ ಒಪ್ಪಂದದ ಭೀತಿ ಕೃಷಿಕರಿಗೆ ಕಾಡುತ್ತಿದೆ. ಇದರ ವಿರುದ್ಧ ಎಲ್ಲರೂ ಒಂದಾಗಬೇಕು ಎಂದರು.
ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್ ವರ್ಮುಡಿ, ಬದನಾಜೆ ಶಂಕರ ಭಟ್ , ಪುತ್ತೂರು ಶಾಸಕ ಸಂಜೀವ ಮಟಂದೂರು ಮಾತನಾಡಿದರು. ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಉಪಸ್ಥಿತರಿದ್ದರು.
ವಿಜಯಕರ್ನಾಟಕ ಮುಖ್ಯವರದಿಗಾರ ಸುಧಾಕರ ಸುವರ್ಣ ಸ್ವಾಗತಿಸಿ ನಿರೂಪಿಸಿದರು. ಸ್ಥಾನೀಯ ಸಂಪಾದಕ ಕುಮಾರನಾಥ್ ಪ್ರಸ್ತಾವನೆಗೈದರು.
ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶದ ನಿರ್ಣಯಗಳು
* ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಅವೈಜ್ಞಾನಿಕ ವರದಿಯನ್ನು ಕೈಬಿಡಬೇಕು. ಅಡಿಕೆ ಆರೋಗ್ಯಕ್ಕೆ ಹಾನಿಕಾರಕವೆಂದು ಯಾವ ಸಂಶೋಧನೆಯಿಂದಲೂ ಇದುವರೆಗೂ ದೃಢಪಟ್ಟಿಲ್ಲ. ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅಡಕೆ ಆರೋಗ್ಯಕ್ಕೆ ಹಾನಿಕಾರಕವೆಂಬ ಪ್ರಮಾಣ ಪತ್ರವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು.
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…