ವಿಜಯಕರ್ನಾಟಕ ವತಿಯಿಂದ ಆಯೋಜನೆಗೊಂಡ ಸಮಾವೇಶವನ್ನು ಒಡಿಯೂರು ಶ್ರೀಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ, ಕೃಷಿಕರು ಸಂಘಟಿತರಾಗಬೇಕಾದ ಅನಿವಾರ್ಯತೆ ಇದೆ. ಅಡಿಕೆ ಎನ್ನುವುದು ಕೇವಲ ಕೃಷಿಯಲ್ಲ ಅದೊಂದು ಸಂಸ್ಕೃತಿ. ಅಡಿಕೆ ಉಳಿದರೆ ಮಾತ್ರವೇ ಎಲ್ಲವೂ. ಹೀಗಾಗಿ ಎಲ್ಲರೂ ಒಂದಾಗಿ ಅಡಿಕೆ ಪರವಾಗಿ ಹೋರಾಟ ಮಾಡಬೇಕಿದೆ ಎಂದರು.
ಕ್ಯಾಂಪ್ಕೋ ಅದ್ಯಕ್ಷ ಎಸ್ ಆರ್ ಸತೀಶ್ಚಂದ್ರ ಮಾತನಾಡಿ, ಅಡಿಕೆ ಪರವಾಗಿ ಕ್ಯಾಂಪ್ಕೋ ಕೆಲಸ ಮಾಡಿದೆ. ಮುಂದೆಯೂ ಮಾಡುತ್ತಿದೆ. ಇದೀಗ ಆರ್ ಸಿ ಇ ಪಿ ಗೆ ಸಹಿ ಹಾಕುವ ಮುನ್ನ ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದು ಅಡಿಕೆ ಬೆಳೆಗಾರರಿಗೆ ಯಾವುದೇ ಆತಂಕ ಬೇಡ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಮಾತನಾಡಿ ಅಡಿಕೆ ಧಾರಣೆ ಇದ್ದರೆ ಮಾತ್ರವೇ ಕರಾವಳಿ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ಸರಿಯಾಗಿ ನಡೆಯಲು ಸಾದ್ಯ. ಇದೀಗ ಮುಕ್ತ ವ್ಯಾಪಾರ ಒಪ್ಪಂದದ ಭೀತಿ ಕೃಷಿಕರಿಗೆ ಕಾಡುತ್ತಿದೆ. ಇದರ ವಿರುದ್ಧ ಎಲ್ಲರೂ ಒಂದಾಗಬೇಕು ಎಂದರು.
ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್ ವರ್ಮುಡಿ, ಬದನಾಜೆ ಶಂಕರ ಭಟ್ , ಪುತ್ತೂರು ಶಾಸಕ ಸಂಜೀವ ಮಟಂದೂರು ಮಾತನಾಡಿದರು. ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಉಪಸ್ಥಿತರಿದ್ದರು.
ವಿಜಯಕರ್ನಾಟಕ ಮುಖ್ಯವರದಿಗಾರ ಸುಧಾಕರ ಸುವರ್ಣ ಸ್ವಾಗತಿಸಿ ನಿರೂಪಿಸಿದರು. ಸ್ಥಾನೀಯ ಸಂಪಾದಕ ಕುಮಾರನಾಥ್ ಪ್ರಸ್ತಾವನೆಗೈದರು.
ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶದ ನಿರ್ಣಯಗಳು
* ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಅವೈಜ್ಞಾನಿಕ ವರದಿಯನ್ನು ಕೈಬಿಡಬೇಕು. ಅಡಿಕೆ ಆರೋಗ್ಯಕ್ಕೆ ಹಾನಿಕಾರಕವೆಂದು ಯಾವ ಸಂಶೋಧನೆಯಿಂದಲೂ ಇದುವರೆಗೂ ದೃಢಪಟ್ಟಿಲ್ಲ. ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅಡಕೆ ಆರೋಗ್ಯಕ್ಕೆ ಹಾನಿಕಾರಕವೆಂಬ ಪ್ರಮಾಣ ಪತ್ರವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…