Advertisement
ಕಾರ್ಯಕ್ರಮಗಳು

ಪುತ್ತೂರಿನಲ್ಲಿ “ಅನ್ವೇಷಣಾ-2019 ಅಗ್ರಿಟಿಂಕರಿಂಗ್ ಫೆಸ್ಟ್”–ಕ್ಯಾಂಪ್ಕೊ ಸಹಯೋಗ

Share

ಪುತ್ತೂರು: ಕೃಷಿ ಕ್ಷೇತ್ರದಲ್ಲಿ ಜನತೆ ಆಸಕ್ತಿಯನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ, ಯುವಜನತೆಯನ್ನು ಕೃಷಿಯೆಡೆಗೆ ಸೆಳೆಯುವ ಮತ್ತು ಕೃಷಿ ತಂತ್ರಜ್ಞಾನದಲ್ಲಿ ಆಸಕ್ತರನ್ನು ಮುಖ್ಯವಾಹಿನಿಗೆ ಕರೆತರುವ ಉದ್ದೇಶದೊಂದಿಗೆ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ “ಅನ್ವೇಷಣಾ-2019 ಅಗ್ರಿಟಿಂಕರಿಂಗ್ ಫೆಸ್ಟ್” ಆಯೋಜಿಸಿದೆ. ಇದು, ಇದೇ ನ.30 ಹಾಗೂ ಡಿ.1ರಂದು ಶಾಲಾ ವಠಾರದಲ್ಲಿ ನಡೆಯಲಿದೆ.

ಕೃಷಿಕರ ಕಣ್ಮಣಿಯಾದ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊದ ಸಹಭಾಗಿತ್ವದಲ್ಲಿ ನಡೆಯುವ ಈ ಕೃಷಿ ಉತ್ಸವದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಮೊದಲ್ಗೊಂಡು, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳು ಮತ್ತು ಕೃಷಿಕರು ವಿವಿಧ ವಯೋಮಾನದ ವಿಭಾಗಗಳಲ್ಲಿ ತಮ್ಮ ಕೃಷಿ ಸಂಬಂಧಿ ಆವಿಷ್ಕಾರಗಳನ್ನು ಪ್ರದರ್ಶಿಸಲಿದ್ದಾರೆ.

ರಾಜ್ಯ ಮಟ್ಟದಲ್ಲಿ ನಡೆಯುವ ಈ ಕೃಷಿ ವಿಜ್ಞಾನ ಮೇಳವು ಸೃಜನಾತ್ಮಕವಾದ ಆವಿಷ್ಕಾರಗಳು, ಮಾದರಿಗಳು, ಯೋಜನಾ ವರದಿಗಳನ್ನು ಕೃಷಿಕರು, ಸಂಬಂಧಪಟ್ಟ ಸಂಘ-ಸಂಸ್ಥೆಗಳು, ಸರಕಾರದ ನೀತಿ ಸಂಯೋಜಕರು, ಮಾಧ್ಯಮಗಳ ಮುಂದೆ ಪ್ರಸ್ತುತಪಡಿಸುವ ವೇದಿಕೆಯಾಗಿದ್ದು, ಉತ್ತಮವಾದ ಆವಿಷ್ಕಾರಗಳು, ಮಾದರಿಗಳನ್ನು ವಿವಿಧ ಸಂಸ್ಥೆಗಳು, ಕಂಪೆನಿಗಳು ಗುರುತಿಸಿ ಪ್ರಾಯೋಗಿಕವಾಗಿ ಕಾರ್ಯಗತಗೊಳಿಸುವ ಹಾಗೂ ವಾಣಿಜ್ಯ ಉತ್ಪನ್ನವಾಗಿ ಮಾರುಕಟ್ಟೆಗೆ ಪರಿಚಯಪಡಿಸುವಂತೆಯೂ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ಆವಿಷ್ಕಾರಿಗಳ ಕೃಷಿಸ್ನೇಹಿ ಯೋಚನೆ-ಯೋಜನೆಗಳನ್ನು ದೊಡ್ಡಮಟ್ಟದಲ್ಲಿ ಬೆಳೆಯಲು ಪ್ರೆರೇಪಿಸುವ ಸದುದ್ದೇಶದೊಂದಿಗೆ ಆಯೋಜನೆಗೊಂಡಿರುವ ಈ ಕೃಷಿ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಕ್ಯಾಂಪ್ಕೋ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

14 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

17 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

20 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago