Advertisement
ಕಾರ್ಯಕ್ರಮಗಳು

ಪುತ್ತೂರಿನಲ್ಲಿ “ಅನ್ವೇಷಣಾ-2019 ಅಗ್ರಿಟಿಂಕರಿಂಗ್ ಫೆಸ್ಟ್”–ಕ್ಯಾಂಪ್ಕೊ ಸಹಯೋಗ

Share

ಪುತ್ತೂರು: ಕೃಷಿ ಕ್ಷೇತ್ರದಲ್ಲಿ ಜನತೆ ಆಸಕ್ತಿಯನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ, ಯುವಜನತೆಯನ್ನು ಕೃಷಿಯೆಡೆಗೆ ಸೆಳೆಯುವ ಮತ್ತು ಕೃಷಿ ತಂತ್ರಜ್ಞಾನದಲ್ಲಿ ಆಸಕ್ತರನ್ನು ಮುಖ್ಯವಾಹಿನಿಗೆ ಕರೆತರುವ ಉದ್ದೇಶದೊಂದಿಗೆ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ “ಅನ್ವೇಷಣಾ-2019 ಅಗ್ರಿಟಿಂಕರಿಂಗ್ ಫೆಸ್ಟ್” ಆಯೋಜಿಸಿದೆ. ಇದು, ಇದೇ ನ.30 ಹಾಗೂ ಡಿ.1ರಂದು ಶಾಲಾ ವಠಾರದಲ್ಲಿ ನಡೆಯಲಿದೆ.

ಕೃಷಿಕರ ಕಣ್ಮಣಿಯಾದ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊದ ಸಹಭಾಗಿತ್ವದಲ್ಲಿ ನಡೆಯುವ ಈ ಕೃಷಿ ಉತ್ಸವದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಮೊದಲ್ಗೊಂಡು, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳು ಮತ್ತು ಕೃಷಿಕರು ವಿವಿಧ ವಯೋಮಾನದ ವಿಭಾಗಗಳಲ್ಲಿ ತಮ್ಮ ಕೃಷಿ ಸಂಬಂಧಿ ಆವಿಷ್ಕಾರಗಳನ್ನು ಪ್ರದರ್ಶಿಸಲಿದ್ದಾರೆ.

ರಾಜ್ಯ ಮಟ್ಟದಲ್ಲಿ ನಡೆಯುವ ಈ ಕೃಷಿ ವಿಜ್ಞಾನ ಮೇಳವು ಸೃಜನಾತ್ಮಕವಾದ ಆವಿಷ್ಕಾರಗಳು, ಮಾದರಿಗಳು, ಯೋಜನಾ ವರದಿಗಳನ್ನು ಕೃಷಿಕರು, ಸಂಬಂಧಪಟ್ಟ ಸಂಘ-ಸಂಸ್ಥೆಗಳು, ಸರಕಾರದ ನೀತಿ ಸಂಯೋಜಕರು, ಮಾಧ್ಯಮಗಳ ಮುಂದೆ ಪ್ರಸ್ತುತಪಡಿಸುವ ವೇದಿಕೆಯಾಗಿದ್ದು, ಉತ್ತಮವಾದ ಆವಿಷ್ಕಾರಗಳು, ಮಾದರಿಗಳನ್ನು ವಿವಿಧ ಸಂಸ್ಥೆಗಳು, ಕಂಪೆನಿಗಳು ಗುರುತಿಸಿ ಪ್ರಾಯೋಗಿಕವಾಗಿ ಕಾರ್ಯಗತಗೊಳಿಸುವ ಹಾಗೂ ವಾಣಿಜ್ಯ ಉತ್ಪನ್ನವಾಗಿ ಮಾರುಕಟ್ಟೆಗೆ ಪರಿಚಯಪಡಿಸುವಂತೆಯೂ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ಆವಿಷ್ಕಾರಿಗಳ ಕೃಷಿಸ್ನೇಹಿ ಯೋಚನೆ-ಯೋಜನೆಗಳನ್ನು ದೊಡ್ಡಮಟ್ಟದಲ್ಲಿ ಬೆಳೆಯಲು ಪ್ರೆರೇಪಿಸುವ ಸದುದ್ದೇಶದೊಂದಿಗೆ ಆಯೋಜನೆಗೊಂಡಿರುವ ಈ ಕೃಷಿ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಕ್ಯಾಂಪ್ಕೋ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

7 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

8 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

17 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

17 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

17 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

22 hours ago