Advertisement
ಕಾರ್ಯಕ್ರಮಗಳು

ಪುತ್ತೂರಿನಲ್ಲಿ “ಅನ್ವೇಷಣಾ-2019 ಅಗ್ರಿಟಿಂಕರಿಂಗ್ ಫೆಸ್ಟ್”–ಕ್ಯಾಂಪ್ಕೊ ಸಹಯೋಗ

Share

ಪುತ್ತೂರು: ಕೃಷಿ ಕ್ಷೇತ್ರದಲ್ಲಿ ಜನತೆ ಆಸಕ್ತಿಯನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ, ಯುವಜನತೆಯನ್ನು ಕೃಷಿಯೆಡೆಗೆ ಸೆಳೆಯುವ ಮತ್ತು ಕೃಷಿ ತಂತ್ರಜ್ಞಾನದಲ್ಲಿ ಆಸಕ್ತರನ್ನು ಮುಖ್ಯವಾಹಿನಿಗೆ ಕರೆತರುವ ಉದ್ದೇಶದೊಂದಿಗೆ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ “ಅನ್ವೇಷಣಾ-2019 ಅಗ್ರಿಟಿಂಕರಿಂಗ್ ಫೆಸ್ಟ್” ಆಯೋಜಿಸಿದೆ. ಇದು, ಇದೇ ನ.30 ಹಾಗೂ ಡಿ.1ರಂದು ಶಾಲಾ ವಠಾರದಲ್ಲಿ ನಡೆಯಲಿದೆ.

ಕೃಷಿಕರ ಕಣ್ಮಣಿಯಾದ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊದ ಸಹಭಾಗಿತ್ವದಲ್ಲಿ ನಡೆಯುವ ಈ ಕೃಷಿ ಉತ್ಸವದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಮೊದಲ್ಗೊಂಡು, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳು ಮತ್ತು ಕೃಷಿಕರು ವಿವಿಧ ವಯೋಮಾನದ ವಿಭಾಗಗಳಲ್ಲಿ ತಮ್ಮ ಕೃಷಿ ಸಂಬಂಧಿ ಆವಿಷ್ಕಾರಗಳನ್ನು ಪ್ರದರ್ಶಿಸಲಿದ್ದಾರೆ.

ರಾಜ್ಯ ಮಟ್ಟದಲ್ಲಿ ನಡೆಯುವ ಈ ಕೃಷಿ ವಿಜ್ಞಾನ ಮೇಳವು ಸೃಜನಾತ್ಮಕವಾದ ಆವಿಷ್ಕಾರಗಳು, ಮಾದರಿಗಳು, ಯೋಜನಾ ವರದಿಗಳನ್ನು ಕೃಷಿಕರು, ಸಂಬಂಧಪಟ್ಟ ಸಂಘ-ಸಂಸ್ಥೆಗಳು, ಸರಕಾರದ ನೀತಿ ಸಂಯೋಜಕರು, ಮಾಧ್ಯಮಗಳ ಮುಂದೆ ಪ್ರಸ್ತುತಪಡಿಸುವ ವೇದಿಕೆಯಾಗಿದ್ದು, ಉತ್ತಮವಾದ ಆವಿಷ್ಕಾರಗಳು, ಮಾದರಿಗಳನ್ನು ವಿವಿಧ ಸಂಸ್ಥೆಗಳು, ಕಂಪೆನಿಗಳು ಗುರುತಿಸಿ ಪ್ರಾಯೋಗಿಕವಾಗಿ ಕಾರ್ಯಗತಗೊಳಿಸುವ ಹಾಗೂ ವಾಣಿಜ್ಯ ಉತ್ಪನ್ನವಾಗಿ ಮಾರುಕಟ್ಟೆಗೆ ಪರಿಚಯಪಡಿಸುವಂತೆಯೂ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ಆವಿಷ್ಕಾರಿಗಳ ಕೃಷಿಸ್ನೇಹಿ ಯೋಚನೆ-ಯೋಜನೆಗಳನ್ನು ದೊಡ್ಡಮಟ್ಟದಲ್ಲಿ ಬೆಳೆಯಲು ಪ್ರೆರೇಪಿಸುವ ಸದುದ್ದೇಶದೊಂದಿಗೆ ಆಯೋಜನೆಗೊಂಡಿರುವ ಈ ಕೃಷಿ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಕ್ಯಾಂಪ್ಕೋ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

1 hour ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

13 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

14 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

21 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago