Advertisement
ಕಾರ್ಯಕ್ರಮಗಳು

ಪುತ್ತೂರಿನಲ್ಲಿ “ಅನ್ವೇಷಣಾ-2019 ಅಗ್ರಿಟಿಂಕರಿಂಗ್ ಫೆಸ್ಟ್”–ಕ್ಯಾಂಪ್ಕೊ ಸಹಯೋಗ

Share

ಪುತ್ತೂರು: ಕೃಷಿ ಕ್ಷೇತ್ರದಲ್ಲಿ ಜನತೆ ಆಸಕ್ತಿಯನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ, ಯುವಜನತೆಯನ್ನು ಕೃಷಿಯೆಡೆಗೆ ಸೆಳೆಯುವ ಮತ್ತು ಕೃಷಿ ತಂತ್ರಜ್ಞಾನದಲ್ಲಿ ಆಸಕ್ತರನ್ನು ಮುಖ್ಯವಾಹಿನಿಗೆ ಕರೆತರುವ ಉದ್ದೇಶದೊಂದಿಗೆ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ “ಅನ್ವೇಷಣಾ-2019 ಅಗ್ರಿಟಿಂಕರಿಂಗ್ ಫೆಸ್ಟ್” ಆಯೋಜಿಸಿದೆ. ಇದು, ಇದೇ ನ.30 ಹಾಗೂ ಡಿ.1ರಂದು ಶಾಲಾ ವಠಾರದಲ್ಲಿ ನಡೆಯಲಿದೆ.

ಕೃಷಿಕರ ಕಣ್ಮಣಿಯಾದ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊದ ಸಹಭಾಗಿತ್ವದಲ್ಲಿ ನಡೆಯುವ ಈ ಕೃಷಿ ಉತ್ಸವದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಮೊದಲ್ಗೊಂಡು, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳು ಮತ್ತು ಕೃಷಿಕರು ವಿವಿಧ ವಯೋಮಾನದ ವಿಭಾಗಗಳಲ್ಲಿ ತಮ್ಮ ಕೃಷಿ ಸಂಬಂಧಿ ಆವಿಷ್ಕಾರಗಳನ್ನು ಪ್ರದರ್ಶಿಸಲಿದ್ದಾರೆ.

ರಾಜ್ಯ ಮಟ್ಟದಲ್ಲಿ ನಡೆಯುವ ಈ ಕೃಷಿ ವಿಜ್ಞಾನ ಮೇಳವು ಸೃಜನಾತ್ಮಕವಾದ ಆವಿಷ್ಕಾರಗಳು, ಮಾದರಿಗಳು, ಯೋಜನಾ ವರದಿಗಳನ್ನು ಕೃಷಿಕರು, ಸಂಬಂಧಪಟ್ಟ ಸಂಘ-ಸಂಸ್ಥೆಗಳು, ಸರಕಾರದ ನೀತಿ ಸಂಯೋಜಕರು, ಮಾಧ್ಯಮಗಳ ಮುಂದೆ ಪ್ರಸ್ತುತಪಡಿಸುವ ವೇದಿಕೆಯಾಗಿದ್ದು, ಉತ್ತಮವಾದ ಆವಿಷ್ಕಾರಗಳು, ಮಾದರಿಗಳನ್ನು ವಿವಿಧ ಸಂಸ್ಥೆಗಳು, ಕಂಪೆನಿಗಳು ಗುರುತಿಸಿ ಪ್ರಾಯೋಗಿಕವಾಗಿ ಕಾರ್ಯಗತಗೊಳಿಸುವ ಹಾಗೂ ವಾಣಿಜ್ಯ ಉತ್ಪನ್ನವಾಗಿ ಮಾರುಕಟ್ಟೆಗೆ ಪರಿಚಯಪಡಿಸುವಂತೆಯೂ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ಆವಿಷ್ಕಾರಿಗಳ ಕೃಷಿಸ್ನೇಹಿ ಯೋಚನೆ-ಯೋಜನೆಗಳನ್ನು ದೊಡ್ಡಮಟ್ಟದಲ್ಲಿ ಬೆಳೆಯಲು ಪ್ರೆರೇಪಿಸುವ ಸದುದ್ದೇಶದೊಂದಿಗೆ ಆಯೋಜನೆಗೊಂಡಿರುವ ಈ ಕೃಷಿ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಕ್ಯಾಂಪ್ಕೋ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

1 hour ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

6 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

9 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

9 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

24 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

1 day ago