ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಇಂದು (ಜೂ.16 ) ಸಂಜೆ ಸಮಾಪನಗೊಳ್ಳಲಿದೆ. ಮೇಳದಲ್ಲಿ 30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ ಮಳಿಗೆಗಳು ಇವೆ. ಹಲಸು ಕೇಸರಿಬಾತ್ , ಹಲಸಿನ ವಿವಿಧ ಖಾದ್ಯಗಳು ಗಮನಸೆಳೆಯುತ್ತಿವೆ.
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಲಸು ಸ್ನೇಹ ಸಂಗಮ ಹಾಗೂ ಐಐಎಚ್ಆರ್ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪುತ್ತೂರು ಜೇಸಿಐ ಮನತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಲಸು ಸಾರ ಮೇಳ ನಡೆಯುತ್ತಿದೆ. ನಿನ್ನೆ (ಜೂ.15 ) ಉದ್ಘಾಟನೆಗೊಂಡ ಹಲಸು ಸಾರ ಮೇಳದಲ್ಲಿ ಹಲಸಿನ ಕಾಯಿ ಹಾಗೂ ಹಣ್ಣಿನ ದೋಸೆ, ಹಲಸಿನ ಬೀಜದ ಹೊಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಹಪ್ಪಳ ಚಾಟ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್ , ಪಲಾವ್, ಪೋಡಿ, ಹಲಸಿನ ಬೀಜದ ಅಂಬೊಡೆ, ಹಲಸಿನಕಾಯಿ ಅಂಬೊಡೆ, ಹಲಸಿನಬೀಜದ ಜಾಮೂನ್ , ಹಲಸಿನಬೀಜದ ಬಿಸ್ಕೆಟ್ , ಇನ್ಟಂಟ್ ರಸಂ ಪೌಡರ್, ಹಲಸಿನಹಣ್ಣಿನ ಕೇಸರಿಬಾತ್ , ಕಲರ್ ರಹಿತ ಹಲಸಿನಹಪ್ಪಳ, ತೆಂಗಿನ ಎಣ್ಣೆಯಲ್ಲಿ ಕರಿದ ಹಲಸಿನ ಚಿಪ್ಸ್,
ಹಲಸಿನ ಬೀಜದ ಬಿಸ್ಕೆಟ್ , ಉಪ್ಪುಸೊಳೆ ವಡೆ ಹಲಸಿನ ಐಸ್ ಕ್ರೀಂ , ಕ್ಯಾಂಡಿ, ಹಲಸಿನ ಬೀಜದ ಪತ್ರೊಡೆ, ಪಾಯಸ, ಗಟ್ಟಿ, ಕಡುಬು, ಹಲಸಿನ ಬೀಜದ ಬರ್ಫಿ, ಹಲಸಿನ ಹಲ್ವಾ ಮೇಳದಲ್ಲಿದೆ. ಮೇಳವು ಇಂದು ಸಂಜೆ ಸಮಾಪನಗೊಳ್ಳಲಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…