Advertisement
ಜಿಲ್ಲೆ

ಪುತ್ತೂರಿನಲ್ಲಿ ಇಂದು ಹಲಸು ಮೇಳ ಸಮಾಪನ

Share

ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ  ಇಂದು (ಜೂ.16 ) ಸಂಜೆ ಸಮಾಪನಗೊಳ್ಳಲಿದೆ. ಮೇಳದಲ್ಲಿ  30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ  ಮಳಿಗೆಗಳು ಇವೆ. ಹಲಸು ಕೇಸರಿಬಾತ್ , ಹಲಸಿನ ವಿವಿಧ ಖಾದ್ಯಗಳು ಗಮನಸೆಳೆಯುತ್ತಿವೆ.

 

 

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಲಸು ಸ್ನೇಹ ಸಂಗಮ ಹಾಗೂ ಐಐಎಚ್‍ಆರ್ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪುತ್ತೂರು ಜೇಸಿಐ ಮನತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಲಸು ಸಾರ ಮೇಳ ನಡೆಯುತ್ತಿದೆ. ನಿನ್ನೆ (ಜೂ.15 ) ಉದ್ಘಾಟನೆಗೊಂಡ ಹಲಸು ಸಾರ ಮೇಳದಲ್ಲಿ ಹಲಸಿನ ಕಾಯಿ ಹಾಗೂ ಹಣ್ಣಿನ ದೋಸೆ, ಹಲಸಿನ ಬೀಜದ ಹೊಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಹಪ್ಪಳ ಚಾಟ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್ , ಪಲಾವ್, ಪೋಡಿ, ಹಲಸಿನ ಬೀಜದ ಅಂಬೊಡೆ, ಹಲಸಿನಕಾಯಿ ಅಂಬೊಡೆ, ಹಲಸಿನಬೀಜದ ಜಾಮೂನ್ , ಹಲಸಿನಬೀಜದ ಬಿಸ್ಕೆಟ್ , ಇನ್ಟಂಟ್ ರಸಂ ಪೌಡರ್, ಹಲಸಿನಹಣ್ಣಿನ ಕೇಸರಿಬಾತ್ , ಕಲರ್ ರಹಿತ ಹಲಸಿನಹಪ್ಪಳ, ತೆಂಗಿನ ಎಣ್ಣೆಯಲ್ಲಿ ಕರಿದ ಹಲಸಿನ ಚಿಪ್ಸ್,
ಹಲಸಿನ ಬೀಜದ ಬಿಸ್ಕೆಟ್ , ಉಪ್ಪುಸೊಳೆ ವಡೆ ಹಲಸಿನ ಐಸ್ ಕ್ರೀಂ , ಕ್ಯಾಂಡಿ, ಹಲಸಿನ ಬೀಜದ ಪತ್ರೊಡೆ, ಪಾಯಸ, ಗಟ್ಟಿ, ಕಡುಬು, ಹಲಸಿನ ಬೀಜದ ಬರ್ಫಿ, ಹಲಸಿನ ಹಲ್ವಾ ಮೇಳದಲ್ಲಿದೆ. ಮೇಳವು ಇಂದು ಸಂಜೆ ಸಮಾಪನಗೊಳ್ಳಲಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

3 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

3 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

3 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

4 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

16 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago