ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಇಂದು (ಜೂ.16 ) ಸಂಜೆ ಸಮಾಪನಗೊಳ್ಳಲಿದೆ. ಮೇಳದಲ್ಲಿ 30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ ಮಳಿಗೆಗಳು ಇವೆ. ಹಲಸು ಕೇಸರಿಬಾತ್ , ಹಲಸಿನ ವಿವಿಧ ಖಾದ್ಯಗಳು ಗಮನಸೆಳೆಯುತ್ತಿವೆ.
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಲಸು ಸ್ನೇಹ ಸಂಗಮ ಹಾಗೂ ಐಐಎಚ್ಆರ್ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪುತ್ತೂರು ಜೇಸಿಐ ಮನತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಲಸು ಸಾರ ಮೇಳ ನಡೆಯುತ್ತಿದೆ. ನಿನ್ನೆ (ಜೂ.15 ) ಉದ್ಘಾಟನೆಗೊಂಡ ಹಲಸು ಸಾರ ಮೇಳದಲ್ಲಿ ಹಲಸಿನ ಕಾಯಿ ಹಾಗೂ ಹಣ್ಣಿನ ದೋಸೆ, ಹಲಸಿನ ಬೀಜದ ಹೊಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಹಪ್ಪಳ ಚಾಟ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್ , ಪಲಾವ್, ಪೋಡಿ, ಹಲಸಿನ ಬೀಜದ ಅಂಬೊಡೆ, ಹಲಸಿನಕಾಯಿ ಅಂಬೊಡೆ, ಹಲಸಿನಬೀಜದ ಜಾಮೂನ್ , ಹಲಸಿನಬೀಜದ ಬಿಸ್ಕೆಟ್ , ಇನ್ಟಂಟ್ ರಸಂ ಪೌಡರ್, ಹಲಸಿನಹಣ್ಣಿನ ಕೇಸರಿಬಾತ್ , ಕಲರ್ ರಹಿತ ಹಲಸಿನಹಪ್ಪಳ, ತೆಂಗಿನ ಎಣ್ಣೆಯಲ್ಲಿ ಕರಿದ ಹಲಸಿನ ಚಿಪ್ಸ್,
ಹಲಸಿನ ಬೀಜದ ಬಿಸ್ಕೆಟ್ , ಉಪ್ಪುಸೊಳೆ ವಡೆ ಹಲಸಿನ ಐಸ್ ಕ್ರೀಂ , ಕ್ಯಾಂಡಿ, ಹಲಸಿನ ಬೀಜದ ಪತ್ರೊಡೆ, ಪಾಯಸ, ಗಟ್ಟಿ, ಕಡುಬು, ಹಲಸಿನ ಬೀಜದ ಬರ್ಫಿ, ಹಲಸಿನ ಹಲ್ವಾ ಮೇಳದಲ್ಲಿದೆ. ಮೇಳವು ಇಂದು ಸಂಜೆ ಸಮಾಪನಗೊಳ್ಳಲಿದೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…