ಪುತ್ತೂರಿನಲ್ಲಿ ಜೂ.15, 16 ಹಲಸು ಮೇಳ : ಹಲಸು ಚಾಟ್ , ಹಲಸು ಕೇಸರಿಬಾತ್ ಈ ಬಾರಿಯ ಸ್ಪೆಶಲ್..!

June 13, 2019
9:00 PM

ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜೂ.15 ಹಾಗೂ 16 ರಂದು ನಡೆಯಲಿದೆ. ಈ ಮೇಳಕ್ಕೆ 40 ಕ್ಕೂ ಅಧಿಕ ಮಳಿಗೆಗಳು ಬರಲಿದ್ದು ಅದರಲ್ಲಿ 30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ ಕಂಡುಬರಲಿದೆ. ಈ ಬಾರಿಯ ಮೇಳದಲ್ಲಿ ಹಲಸು ಹಪ್ಪಳದ ಚಾಟ್ ಹಾಗೂ ಹಲಸು ಕೇಸರಿಬಾತ್ ವಿಶೇಷವಾಗಿ ಕಾಣಲಿದೆ.

Advertisement
Advertisement

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಲಸು ಸ್ನೇಹ ಸಂಗಮ ಹಾಗೂ ಐಐಎಚ್‍ಆರ್ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪುತ್ತೂರು ಜೇಸಿಐ ಮನತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಲಸು ಸಾರ ಮೇಳ ನಡೆಯಲಿದೆ. ಕಳೆದ ಬಾರಿ ಹಲಸು ಮೇಳ ಯಶಸ್ವಿಯಾಗಿ ನಡೆದಿತ್ತು. ಈ ಬಾರಿ ಕೂಡಾ ಅದೇ ಮಾದರಿಯಲ್ಲಿ ಮೇಳ ನಡೆಯಲಿದೆ. ಈ ಬಾರಿ 40 ಕ್ಕೂ ಅಧಿಕ ಮಳಿಗೆ ಬರಲಿದ್ದು ಅದರಲ್ಲಿ ಹಲಸಿನ ಮಳಿಗೆಗಳೇ 30 ಕ್ಕಿಂತ ಹೆಚ್ಚು ಬರಲಿದೆ. ಕಲರ್ ಬಳಕೆ ಕಡಿಮೆ ಇರುವ ವಸ್ತುಗಳನ್ನೇ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಮೇಳದಲ್ಲಿ ವಿಶೇಷವಾಗಿ ಹಲಸಿನ ಕಾಯಿ ಹಾಗೂ ಹಣ್ಣಿನ ದೋಸೆ, ಹಲಸಿನ ಬೀಜದ ಹೊಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಹಪ್ಪಳ ಚಾಟ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್ , ಪಲಾವ್, ಪೋಡಿ, ಹಲಸಿನ ಬೀಜದ ಅಂಬೊಡೆ, ಹಲಸಿನಕಾಯಿ ಅಂಬೊಡೆ, ಹಲಸಿನಬೀಜದ ಜಾಮೂನ್ , ಹಲಸಿನಬೀಜದ ಬಿಸ್ಕೆಟ್ , ಇನ್ಟಂಟ್ ರಸಂ ಪೌಡರ್, ಹಲಸಿನಹಣ್ಣಿನ ಕೇಸರಿಬಾತ್ , ಕಲರ್ ರಹಿತ ಹಲಸಿನಹಪ್ಪಳ, ತೆಂಗಿನ ಎಣ್ಣೆಯಲ್ಲಿ ಕರಿದ ಹಲಸಿನ ಚಿಪ್ಸ್,  ಹಲಸಿನ ಬೀಜದ ಬಿಸ್ಕೆಟ್ , ಉಪ್ಪುಸೊಳೆ ವಡೆ ಹಲಸಿನ ಐಸ್ ಕ್ರೀಂ , ಕ್ಯಾಂಡಿ, ಹಲಸಿನ ಬೀಜದ ಪತ್ರೊಡೆ, ಪಾಯಸ, ಗಟ್ಟಿ, ಕಡುಬು, ಹಲಸಿನ ಬೀಜದ ಬರ್ಫಿ, ಹಲಸಿನ ಹಲ್ವಾ ಮೇಳದಲ್ಲಿ ಸಿಗಲಿದೆ. ಇದರ ಜೊತೆಗೆ ಹಲಸು ಬಗ್ಗೆ ಮಾತುಕತೆ ,  ಗೋಷ್ಟಿಗಳು ನಡೆಯಲಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |
June 2, 2025
2:15 PM
by: The Rural Mirror ಸುದ್ದಿಜಾಲ
ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ
June 2, 2025
11:20 AM
by: The Rural Mirror ಸುದ್ದಿಜಾಲ
ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ
June 2, 2025
7:33 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
June 2, 2025
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group