Advertisement
ಮಾಹಿತಿ

ಪುತ್ತೂರಿನಲ್ಲಿ ಜೂ.15, 16 ಹಲಸು ಮೇಳ : ಹಲಸು ಚಾಟ್ , ಹಲಸು ಕೇಸರಿಬಾತ್ ಈ ಬಾರಿಯ ಸ್ಪೆಶಲ್..!

Share

ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜೂ.15 ಹಾಗೂ 16 ರಂದು ನಡೆಯಲಿದೆ. ಈ ಮೇಳಕ್ಕೆ 40 ಕ್ಕೂ ಅಧಿಕ ಮಳಿಗೆಗಳು ಬರಲಿದ್ದು ಅದರಲ್ಲಿ 30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ ಕಂಡುಬರಲಿದೆ. ಈ ಬಾರಿಯ ಮೇಳದಲ್ಲಿ ಹಲಸು ಹಪ್ಪಳದ ಚಾಟ್ ಹಾಗೂ ಹಲಸು ಕೇಸರಿಬಾತ್ ವಿಶೇಷವಾಗಿ ಕಾಣಲಿದೆ.

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಲಸು ಸ್ನೇಹ ಸಂಗಮ ಹಾಗೂ ಐಐಎಚ್‍ಆರ್ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪುತ್ತೂರು ಜೇಸಿಐ ಮನತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಲಸು ಸಾರ ಮೇಳ ನಡೆಯಲಿದೆ. ಕಳೆದ ಬಾರಿ ಹಲಸು ಮೇಳ ಯಶಸ್ವಿಯಾಗಿ ನಡೆದಿತ್ತು. ಈ ಬಾರಿ ಕೂಡಾ ಅದೇ ಮಾದರಿಯಲ್ಲಿ ಮೇಳ ನಡೆಯಲಿದೆ. ಈ ಬಾರಿ 40 ಕ್ಕೂ ಅಧಿಕ ಮಳಿಗೆ ಬರಲಿದ್ದು ಅದರಲ್ಲಿ ಹಲಸಿನ ಮಳಿಗೆಗಳೇ 30 ಕ್ಕಿಂತ ಹೆಚ್ಚು ಬರಲಿದೆ. ಕಲರ್ ಬಳಕೆ ಕಡಿಮೆ ಇರುವ ವಸ್ತುಗಳನ್ನೇ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಮೇಳದಲ್ಲಿ ವಿಶೇಷವಾಗಿ ಹಲಸಿನ ಕಾಯಿ ಹಾಗೂ ಹಣ್ಣಿನ ದೋಸೆ, ಹಲಸಿನ ಬೀಜದ ಹೊಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಹಪ್ಪಳ ಚಾಟ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್ , ಪಲಾವ್, ಪೋಡಿ, ಹಲಸಿನ ಬೀಜದ ಅಂಬೊಡೆ, ಹಲಸಿನಕಾಯಿ ಅಂಬೊಡೆ, ಹಲಸಿನಬೀಜದ ಜಾಮೂನ್ , ಹಲಸಿನಬೀಜದ ಬಿಸ್ಕೆಟ್ , ಇನ್ಟಂಟ್ ರಸಂ ಪೌಡರ್, ಹಲಸಿನಹಣ್ಣಿನ ಕೇಸರಿಬಾತ್ , ಕಲರ್ ರಹಿತ ಹಲಸಿನಹಪ್ಪಳ, ತೆಂಗಿನ ಎಣ್ಣೆಯಲ್ಲಿ ಕರಿದ ಹಲಸಿನ ಚಿಪ್ಸ್,  ಹಲಸಿನ ಬೀಜದ ಬಿಸ್ಕೆಟ್ , ಉಪ್ಪುಸೊಳೆ ವಡೆ ಹಲಸಿನ ಐಸ್ ಕ್ರೀಂ , ಕ್ಯಾಂಡಿ, ಹಲಸಿನ ಬೀಜದ ಪತ್ರೊಡೆ, ಪಾಯಸ, ಗಟ್ಟಿ, ಕಡುಬು, ಹಲಸಿನ ಬೀಜದ ಬರ್ಫಿ, ಹಲಸಿನ ಹಲ್ವಾ ಮೇಳದಲ್ಲಿ ಸಿಗಲಿದೆ. ಇದರ ಜೊತೆಗೆ ಹಲಸು ಬಗ್ಗೆ ಮಾತುಕತೆ ,  ಗೋಷ್ಟಿಗಳು ನಡೆಯಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

13 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

19 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

23 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago