Advertisement
ಮಾಹಿತಿ

ಪುತ್ತೂರಿನಲ್ಲಿ ಜೂ.15, 16 ಹಲಸು ಮೇಳ : ಹಲಸು ಚಾಟ್ , ಹಲಸು ಕೇಸರಿಬಾತ್ ಈ ಬಾರಿಯ ಸ್ಪೆಶಲ್..!

Share

ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜೂ.15 ಹಾಗೂ 16 ರಂದು ನಡೆಯಲಿದೆ. ಈ ಮೇಳಕ್ಕೆ 40 ಕ್ಕೂ ಅಧಿಕ ಮಳಿಗೆಗಳು ಬರಲಿದ್ದು ಅದರಲ್ಲಿ 30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ ಕಂಡುಬರಲಿದೆ. ಈ ಬಾರಿಯ ಮೇಳದಲ್ಲಿ ಹಲಸು ಹಪ್ಪಳದ ಚಾಟ್ ಹಾಗೂ ಹಲಸು ಕೇಸರಿಬಾತ್ ವಿಶೇಷವಾಗಿ ಕಾಣಲಿದೆ.

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಲಸು ಸ್ನೇಹ ಸಂಗಮ ಹಾಗೂ ಐಐಎಚ್‍ಆರ್ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪುತ್ತೂರು ಜೇಸಿಐ ಮನತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಲಸು ಸಾರ ಮೇಳ ನಡೆಯಲಿದೆ. ಕಳೆದ ಬಾರಿ ಹಲಸು ಮೇಳ ಯಶಸ್ವಿಯಾಗಿ ನಡೆದಿತ್ತು. ಈ ಬಾರಿ ಕೂಡಾ ಅದೇ ಮಾದರಿಯಲ್ಲಿ ಮೇಳ ನಡೆಯಲಿದೆ. ಈ ಬಾರಿ 40 ಕ್ಕೂ ಅಧಿಕ ಮಳಿಗೆ ಬರಲಿದ್ದು ಅದರಲ್ಲಿ ಹಲಸಿನ ಮಳಿಗೆಗಳೇ 30 ಕ್ಕಿಂತ ಹೆಚ್ಚು ಬರಲಿದೆ. ಕಲರ್ ಬಳಕೆ ಕಡಿಮೆ ಇರುವ ವಸ್ತುಗಳನ್ನೇ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಮೇಳದಲ್ಲಿ ವಿಶೇಷವಾಗಿ ಹಲಸಿನ ಕಾಯಿ ಹಾಗೂ ಹಣ್ಣಿನ ದೋಸೆ, ಹಲಸಿನ ಬೀಜದ ಹೊಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಹಪ್ಪಳ ಚಾಟ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್ , ಪಲಾವ್, ಪೋಡಿ, ಹಲಸಿನ ಬೀಜದ ಅಂಬೊಡೆ, ಹಲಸಿನಕಾಯಿ ಅಂಬೊಡೆ, ಹಲಸಿನಬೀಜದ ಜಾಮೂನ್ , ಹಲಸಿನಬೀಜದ ಬಿಸ್ಕೆಟ್ , ಇನ್ಟಂಟ್ ರಸಂ ಪೌಡರ್, ಹಲಸಿನಹಣ್ಣಿನ ಕೇಸರಿಬಾತ್ , ಕಲರ್ ರಹಿತ ಹಲಸಿನಹಪ್ಪಳ, ತೆಂಗಿನ ಎಣ್ಣೆಯಲ್ಲಿ ಕರಿದ ಹಲಸಿನ ಚಿಪ್ಸ್,  ಹಲಸಿನ ಬೀಜದ ಬಿಸ್ಕೆಟ್ , ಉಪ್ಪುಸೊಳೆ ವಡೆ ಹಲಸಿನ ಐಸ್ ಕ್ರೀಂ , ಕ್ಯಾಂಡಿ, ಹಲಸಿನ ಬೀಜದ ಪತ್ರೊಡೆ, ಪಾಯಸ, ಗಟ್ಟಿ, ಕಡುಬು, ಹಲಸಿನ ಬೀಜದ ಬರ್ಫಿ, ಹಲಸಿನ ಹಲ್ವಾ ಮೇಳದಲ್ಲಿ ಸಿಗಲಿದೆ. ಇದರ ಜೊತೆಗೆ ಹಲಸು ಬಗ್ಗೆ ಮಾತುಕತೆ ,  ಗೋಷ್ಟಿಗಳು ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

21 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago