Advertisement
ಮಾಹಿತಿ

ಪುತ್ತೂರಿನಲ್ಲಿ ಜೂ.15, 16 ಹಲಸು ಮೇಳ : ಹಲಸು ಚಾಟ್ , ಹಲಸು ಕೇಸರಿಬಾತ್ ಈ ಬಾರಿಯ ಸ್ಪೆಶಲ್..!

Share

ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜೂ.15 ಹಾಗೂ 16 ರಂದು ನಡೆಯಲಿದೆ. ಈ ಮೇಳಕ್ಕೆ 40 ಕ್ಕೂ ಅಧಿಕ ಮಳಿಗೆಗಳು ಬರಲಿದ್ದು ಅದರಲ್ಲಿ 30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ ಕಂಡುಬರಲಿದೆ. ಈ ಬಾರಿಯ ಮೇಳದಲ್ಲಿ ಹಲಸು ಹಪ್ಪಳದ ಚಾಟ್ ಹಾಗೂ ಹಲಸು ಕೇಸರಿಬಾತ್ ವಿಶೇಷವಾಗಿ ಕಾಣಲಿದೆ.

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಲಸು ಸ್ನೇಹ ಸಂಗಮ ಹಾಗೂ ಐಐಎಚ್‍ಆರ್ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪುತ್ತೂರು ಜೇಸಿಐ ಮನತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಲಸು ಸಾರ ಮೇಳ ನಡೆಯಲಿದೆ. ಕಳೆದ ಬಾರಿ ಹಲಸು ಮೇಳ ಯಶಸ್ವಿಯಾಗಿ ನಡೆದಿತ್ತು. ಈ ಬಾರಿ ಕೂಡಾ ಅದೇ ಮಾದರಿಯಲ್ಲಿ ಮೇಳ ನಡೆಯಲಿದೆ. ಈ ಬಾರಿ 40 ಕ್ಕೂ ಅಧಿಕ ಮಳಿಗೆ ಬರಲಿದ್ದು ಅದರಲ್ಲಿ ಹಲಸಿನ ಮಳಿಗೆಗಳೇ 30 ಕ್ಕಿಂತ ಹೆಚ್ಚು ಬರಲಿದೆ. ಕಲರ್ ಬಳಕೆ ಕಡಿಮೆ ಇರುವ ವಸ್ತುಗಳನ್ನೇ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಮೇಳದಲ್ಲಿ ವಿಶೇಷವಾಗಿ ಹಲಸಿನ ಕಾಯಿ ಹಾಗೂ ಹಣ್ಣಿನ ದೋಸೆ, ಹಲಸಿನ ಬೀಜದ ಹೊಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಹಪ್ಪಳ ಚಾಟ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್ , ಪಲಾವ್, ಪೋಡಿ, ಹಲಸಿನ ಬೀಜದ ಅಂಬೊಡೆ, ಹಲಸಿನಕಾಯಿ ಅಂಬೊಡೆ, ಹಲಸಿನಬೀಜದ ಜಾಮೂನ್ , ಹಲಸಿನಬೀಜದ ಬಿಸ್ಕೆಟ್ , ಇನ್ಟಂಟ್ ರಸಂ ಪೌಡರ್, ಹಲಸಿನಹಣ್ಣಿನ ಕೇಸರಿಬಾತ್ , ಕಲರ್ ರಹಿತ ಹಲಸಿನಹಪ್ಪಳ, ತೆಂಗಿನ ಎಣ್ಣೆಯಲ್ಲಿ ಕರಿದ ಹಲಸಿನ ಚಿಪ್ಸ್,  ಹಲಸಿನ ಬೀಜದ ಬಿಸ್ಕೆಟ್ , ಉಪ್ಪುಸೊಳೆ ವಡೆ ಹಲಸಿನ ಐಸ್ ಕ್ರೀಂ , ಕ್ಯಾಂಡಿ, ಹಲಸಿನ ಬೀಜದ ಪತ್ರೊಡೆ, ಪಾಯಸ, ಗಟ್ಟಿ, ಕಡುಬು, ಹಲಸಿನ ಬೀಜದ ಬರ್ಫಿ, ಹಲಸಿನ ಹಲ್ವಾ ಮೇಳದಲ್ಲಿ ಸಿಗಲಿದೆ. ಇದರ ಜೊತೆಗೆ ಹಲಸು ಬಗ್ಗೆ ಮಾತುಕತೆ ,  ಗೋಷ್ಟಿಗಳು ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

15 minutes ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

7 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

15 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

17 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

23 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago