Advertisement
ಮಾಹಿತಿ

ಪುತ್ತೂರಿನಲ್ಲಿ ಜೂ.15, 16 ಹಲಸು ಮೇಳ : ಹಲಸು ಚಾಟ್ , ಹಲಸು ಕೇಸರಿಬಾತ್ ಈ ಬಾರಿಯ ಸ್ಪೆಶಲ್..!

Share

ಪುತ್ತೂರು: ಹಲಸು ಸಾರ ಮೇಳ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜೂ.15 ಹಾಗೂ 16 ರಂದು ನಡೆಯಲಿದೆ. ಈ ಮೇಳಕ್ಕೆ 40 ಕ್ಕೂ ಅಧಿಕ ಮಳಿಗೆಗಳು ಬರಲಿದ್ದು ಅದರಲ್ಲಿ 30 ಕ್ಕೂ ಅಧಿಕ ಹಲಸಿನ ಉತ್ಪನ್ನಗಳದ್ದೇ ಕಂಡುಬರಲಿದೆ. ಈ ಬಾರಿಯ ಮೇಳದಲ್ಲಿ ಹಲಸು ಹಪ್ಪಳದ ಚಾಟ್ ಹಾಗೂ ಹಲಸು ಕೇಸರಿಬಾತ್ ವಿಶೇಷವಾಗಿ ಕಾಣಲಿದೆ.

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಲಸು ಸ್ನೇಹ ಸಂಗಮ ಹಾಗೂ ಐಐಎಚ್‍ಆರ್ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸೇರಿದಂತೆ ಪುತ್ತೂರು ಜೇಸಿಐ ಮನತ್ತು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಲಸು ಸಾರ ಮೇಳ ನಡೆಯಲಿದೆ. ಕಳೆದ ಬಾರಿ ಹಲಸು ಮೇಳ ಯಶಸ್ವಿಯಾಗಿ ನಡೆದಿತ್ತು. ಈ ಬಾರಿ ಕೂಡಾ ಅದೇ ಮಾದರಿಯಲ್ಲಿ ಮೇಳ ನಡೆಯಲಿದೆ. ಈ ಬಾರಿ 40 ಕ್ಕೂ ಅಧಿಕ ಮಳಿಗೆ ಬರಲಿದ್ದು ಅದರಲ್ಲಿ ಹಲಸಿನ ಮಳಿಗೆಗಳೇ 30 ಕ್ಕಿಂತ ಹೆಚ್ಚು ಬರಲಿದೆ. ಕಲರ್ ಬಳಕೆ ಕಡಿಮೆ ಇರುವ ವಸ್ತುಗಳನ್ನೇ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಮೇಳದಲ್ಲಿ ವಿಶೇಷವಾಗಿ ಹಲಸಿನ ಕಾಯಿ ಹಾಗೂ ಹಣ್ಣಿನ ದೋಸೆ, ಹಲಸಿನ ಬೀಜದ ಹೊಳಿಗೆ, ಹಲಸಿನ ಹಣ್ಣಿನ ಹಲ್ವ, ಹಲಸಿನ ಹಪ್ಪಳ ಚಾಟ್, ಗುಜ್ಜೆ ಮಂಚೂರಿ, ಕಬಾಬ್, ಹಲಸು ರೋಸ್ಟ್ , ಪಲಾವ್, ಪೋಡಿ, ಹಲಸಿನ ಬೀಜದ ಅಂಬೊಡೆ, ಹಲಸಿನಕಾಯಿ ಅಂಬೊಡೆ, ಹಲಸಿನಬೀಜದ ಜಾಮೂನ್ , ಹಲಸಿನಬೀಜದ ಬಿಸ್ಕೆಟ್ , ಇನ್ಟಂಟ್ ರಸಂ ಪೌಡರ್, ಹಲಸಿನಹಣ್ಣಿನ ಕೇಸರಿಬಾತ್ , ಕಲರ್ ರಹಿತ ಹಲಸಿನಹಪ್ಪಳ, ತೆಂಗಿನ ಎಣ್ಣೆಯಲ್ಲಿ ಕರಿದ ಹಲಸಿನ ಚಿಪ್ಸ್,  ಹಲಸಿನ ಬೀಜದ ಬಿಸ್ಕೆಟ್ , ಉಪ್ಪುಸೊಳೆ ವಡೆ ಹಲಸಿನ ಐಸ್ ಕ್ರೀಂ , ಕ್ಯಾಂಡಿ, ಹಲಸಿನ ಬೀಜದ ಪತ್ರೊಡೆ, ಪಾಯಸ, ಗಟ್ಟಿ, ಕಡುಬು, ಹಲಸಿನ ಬೀಜದ ಬರ್ಫಿ, ಹಲಸಿನ ಹಲ್ವಾ ಮೇಳದಲ್ಲಿ ಸಿಗಲಿದೆ. ಇದರ ಜೊತೆಗೆ ಹಲಸು ಬಗ್ಗೆ ಮಾತುಕತೆ ,  ಗೋಷ್ಟಿಗಳು ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

5 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

7 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

7 hours ago

ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ

ಇಥೆನಾಲ್‌ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…

7 hours ago

ಅಮೆರಿಕ-ಇರಾನ್ ಯುದ್ಧ ಮತ್ತೆ ಭುಗಿಲೇ..? ಕದನ ವಿರಾಮ ಅಂತ್ಯ ಎಂದ ಟ್ರಂಪ್ – ಹೊಸ ದಾಳಿಗಳಿಂದ ಜಾಗತಿಕ ಆತಂಕ

ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…

7 hours ago

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

21 hours ago