Advertisement
ಕೃಷಿ

ಪುತ್ತೂರಿನಲ್ಲಿ ನಡೆಯಲಿದೆ ಹಣ್ಣು ಮೇಳ : ಲೈವ್ ಡೆಮೋಕ್ಕೆ ಸಿದ್ಧವಾಗುತ್ತಿದೆ ಪುತ್ತೂರಿನ ನೆಲ…

Share

ಪುತ್ತೂರು: ಮೇ ತಿಂಗಳ ಅಂತ್ಯದಲ್ಲಿ ಪುತ್ತೂರಿನ ಸುದಾನ ಶಾಲೆಯ ವಠಾರದಲ್ಲಿ  ಹಣ್ಣು ಮೇಳ ನಡೆಯಲಿದೆ. ತೋಟಗಾರಿಕಾ ಮೇಳ ಇದಾಗಿರುವುದರಿಂದ ವಿಶೇಷವಾಗಿ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ನಡೆಯುತ್ತಿದೆ. ಈ ಸಂದರ್ಭ ಕರಾವಳಿ ಜಿಲ್ಲೆಯಲ್ಲಿ  ಬೆಳೆಯುಬಹುದಾದ ಹಣ್ಣುಗಳು ಹಾಗೂ ತರಕಾರಿಗಳ ಲೈವ್ ಡೆಮೋ ನಡೆಯಲಿದೆ. ಇದಕ್ಕಾಗಿ ಗಿಡಗಳ ನಾಟಿ ಮಾಡುವ ಕೆಲಸ ಆರಂಭಗೊಂಡಿದೆ.  ಇದರ ಜೊತೆಗೆ ಮೇಳದ ಮೂಲಕ ಯುವಕರಿಗೆ ನೂತನ ಕೃಷಿಯ ಬಗ್ಗೆ ಸಂದೇಶ ನೀಡುವ ಕೆಲಸದ ಕಡೆಗೆ ಗಮನಹರಿಸಲಾಗಿದೆ.

ನವತೇಜ ಟ್ರಸ್ಟ್ ಪುತ್ತೂರು ಹಾಗೂ ಜೆಸಿಐ ಪುತ್ತೂರು ಇವರ ಸಹಭಾಗಿತ್ವದಲ್ಲಿ, Indian Institute of Horticulture (IIHR) ಸಹಕಾರದಲ್ಲಿ ಮೂರು ದಿನಗಳ “ಪುತ್ತೂರು ಹಣ್ಣು ಮೇಳ-2020” ತೋಟಗಾರಿಕಾ ಮೇಳ ಮೇ.23 ,24 ಹಾಗೂ 25 ರಂದು ಸುದಾನ ಶಾಲೆ ಪುತ್ತೂರಿನಲ್ಲಿ ನಡೆಯಲಿದೆ. ಮೇಳದಲ್ಲಿ ಹಣ್ಣುಗಳ ಪ್ರಾತ್ಯಕ್ಷಿಕೆ, ಚರ್ಚೆಗಳು, ವ್ಯವಹಾರ ಮಳಿಗೆಗಳು ಹಾಗೂ ಹಲವು ಕಾರ್ಯಕ್ರಮಗಳನ್ನು ಒಳಗೊಂಡಿದ್ದು, ಕರ್ನಾಟಕ ಸರಕಾರ, ತೋಟಗಾರಿಕಾ ಇಲಾಖೆ, ಸರ್ಕಾರಿಯೇತರ ಸಂಘ ಸಂಸ್ಥೆಗಳು, ಸಹಕಾರಿ ಸಂಘಗಳು, ರೈತರು, ಹಾಗೂ ಉದ್ಯಮಿಗಳ ಸಹಭಾಗಿತ್ವದಲ್ಲಿ  ಕಾರ್ಯಕ್ರಮ ನಡೆಯಲಿದೆ.

ಮೇಳದ ಮುಖ್ಯ ಉದ್ದೇಶ ಹೀಗಿದೆ….

  • ರೈತರು, ವಿಜ್ಞಾನಿಗಳು, ಸರಕಾರ ಹಾಗೂ ಸಮಾಜವನ್ನು ಒಂದೇ ಸೂರಿನಡಿಯಲ್ಲಿ ತರುವುದು.

  •  ವಿವಿಧ ಹಣ್ಣು ಕೃಷಿಗಳ ಬಗ್ಗೆ ಅರಿವು, ತಿಳುವಳಿಕೆ, ಉತ್ತೇಜನ ಹಾಗೂ ಉದ್ಯಮಶೀಲತೆ

  • ವಿವಿಧ ದೇಶೀಯ, ಸ್ಥಳೀಯ ಹಣ್ಣುಗಳು, ಸಾಂಪ್ರದಾಯಿಕ ವಾಣಿಜ್ಯ ಬೆಳೆಗಳು, ಭವಿಷ್ಯದ ಹಣ್ಣುಗಳ ಬೆಳೆಗಳು, ಮೌಲ್ಯವರ್ಧನೆಗೆ ಅವಕಾಶಗಳು ಮತ್ತು ಹಣ್ಣುಗಳ ಸಂಸ್ಕರಣೆಗಳ ಚಿಂತನೆ

  • ಉಷ್ಣ ವಲಯದ ಹಣ್ಣುಗಳು, ಉತ್ತರದ ಗೋವದಿಂದ ದಕ್ಷಿಣದ ಕಣ್ಣೂರು, ಪಶ್ಚಿಮ ಘಟ್ಟ ಮತ್ತು ಮಲೆನಾಡಿನಲ್ಲಿ ಬೆಳೆಯುವ ಹಣ್ಣುಗಳ ಸುಸ್ಥಿರ ತೋಟಗಾರಿಕೆಯನ್ನು ಉತ್ತೇಜನಗೊಳಿಸುವುದು.

  • ಕಾರ್ಯಕ್ರಮದ ಮೂಲಕ ಯುವ ಕೃಷಿಕರಿಗೆ ಉತ್ತೇಜನ ನೀಡುವುದು

  • ಮಾರುಕಟ್ಟೆ ಬಗ್ಗೆ ಕೃಷಿಕರಿಗೆ ಅರಿವು ಮೂಡಿಸುವುದು

 

ಪುತ್ತೂರಿನಲ್ಲಿ  ಈ ಬಾರಿ ತೋಟಗಾರಿಕಾ ಮೇಳವನ್ನು ವಿಶೇಷವಾಗಿ  ಆಯೋಜನೆಗೆ ಸಿದ್ಧತೆ ನಡೆಯುತ್ತಿದೆ. ಪುತ್ತೂರು ಜೇಸಿಐ ಸಂಪೂರ್ಣ ಸಹಕಾರ ನೀಡುತ್ತಿದೆ. ಇದರ ಜೊತೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಸಹಕಾರದೊಂದಿಗೆ  ಸುದಾನ ಶಾಲೆ, ವಿವಿಧ ಇಲಾಖೆಗಳು ಸಹಭಾಗಿತ್ವ ನೀಡಲಿದೆ. ಕಾರ್ಯಕ್ರಮದ ಮೂಲಕ ಕೃಷಿಕರು ಹಾಗೂ ಗ್ರಾಹಕರಿಗೆ ನೇರ ಸಂಪರ್ಕ ಒದಗಿಸುವುದರ ಜೊತೆಗೆ ಯುವಕೃಷಿಕರನ್ನು ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ.  – ಅನಂತ ಪ್ರಸಾದ್ ನೈತಡ್ಕ, ಅಧ್ಯಕ್ಷ , ನವತೇಜ ಟ್ರಸ್ಟ್ , ಪುತ್ತೂರು

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

44 minutes ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

8 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

8 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

15 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

17 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago