ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ನಡೆಸಿದ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಈ ಕೃತ್ಯ ನಡೆಸಿದ್ದಾರೆ.
ಮಾರ್ಚ್ ತಿಂಗಳ ಕೊನೆಯ ವಾರ ಮದ್ಯಾಹ್ನ 3.00 ಗಂಟೆಗೆ ವಿದ್ಯಾರ್ಥಿನಿಯೊಬ್ಬಳ ಜೊತೆ ಕಾಲೇಜಿನ ಸುನಿಲ್ ಎಂಬಾತನು ಮಾತನಾಡಲಿಕ್ಕಿದೆ ಎಂದು ಕಾರಿನಲ್ಲಿ ಕುಳ್ಳಿರಿಸಿ, ಪ್ರಜ್ವಲ್, ಪ್ರಕೃತ್ ಎಂಬವರನ್ನು ಕೂಡಿಕೊಂಡು ಕಾರಿನಲ್ಲಿ ಚಾಲಕನೊಂದಿಗೆ ಜೊತೆಯಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ 4 ರಿಂದ 5 ಜನ ಆರೋಪಿಗಳು ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುತ್ತಾರೆ ಹಾಗೂ ಈ ವಿಚಾರವನ್ನು ಮುಂದಕ್ಕೆ ಯಾರಲ್ಲಿಯೂ ಹೇಳದಂತೆ ಜೀವ ಬೆದರಿಕೆ ಒಡ್ಡಿರುತ್ತಾರೆ ಮತ್ತು ಈ ಬಗ್ಗೆ ಬೇರೆಯವರಿಗೆ ತಿಳಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಪಡಿಸುವುದಾಗಿ ಬೆದರಿಸಿರುತ್ತಾರೆ ಎಂದು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದು, ಆರೋಪಿಗಳನ್ನು ವಶಪಡಿಸುವಲ್ಲಿ ತಂಡಗಳು ಯಶಸ್ವಿಯಾಗಿರುತ್ತದೆ.
ಆರೋಪಿಗಳು
ಬಜತ್ತೂರು ಗ್ರಾಮದ ಗಾಣದಮೂಲೆ ಮನೆಯ ರಾಧಾಕೃಷ್ಣ ಎಂಬವರ ಪುತ್ರ ಗುರುನಂದನ್ (19),
ಪೆರ್ನೆ ಗ್ರಾಮದ ರಾಜಶ್ರೀ ಕೃಪದ ನಾಗೇಶ್ ನಾಯ್ಕ ಅವರ ಪುತ್ರ ಪ್ರಜ್ವಲ್ (19) ,
ಪೆರ್ನೆ ಗ್ರಾಮದ ಕಡಂಬು ಮನೆ ಸದಾಶಿವ ಅವರ ಪುತ್ರ ಕಿಶನ್(19) ,
ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಪಿಲಿಗುಂಡ ಮನೆಯ ಕಾಂತಪ್ಪ ಗೌಡರ ಪುತ್ರ ಸುನಿಲ್ (19) ,
ಬರಿಮಾರು ಗ್ರಾಮದ ಬಲ್ಯ ಮನೆ ಸುಬ್ಬಣ್ಣ ಶೆಟ್ಟಿ ಅವರ ಪುತ್ರ ಪ್ರಖ್ಯಾತ್(19),
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…