ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ನಡೆಸಿದ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಈ ಕೃತ್ಯ ನಡೆಸಿದ್ದಾರೆ.
ಮಾರ್ಚ್ ತಿಂಗಳ ಕೊನೆಯ ವಾರ ಮದ್ಯಾಹ್ನ 3.00 ಗಂಟೆಗೆ ವಿದ್ಯಾರ್ಥಿನಿಯೊಬ್ಬಳ ಜೊತೆ ಕಾಲೇಜಿನ ಸುನಿಲ್ ಎಂಬಾತನು ಮಾತನಾಡಲಿಕ್ಕಿದೆ ಎಂದು ಕಾರಿನಲ್ಲಿ ಕುಳ್ಳಿರಿಸಿ, ಪ್ರಜ್ವಲ್, ಪ್ರಕೃತ್ ಎಂಬವರನ್ನು ಕೂಡಿಕೊಂಡು ಕಾರಿನಲ್ಲಿ ಚಾಲಕನೊಂದಿಗೆ ಜೊತೆಯಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ 4 ರಿಂದ 5 ಜನ ಆರೋಪಿಗಳು ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುತ್ತಾರೆ ಹಾಗೂ ಈ ವಿಚಾರವನ್ನು ಮುಂದಕ್ಕೆ ಯಾರಲ್ಲಿಯೂ ಹೇಳದಂತೆ ಜೀವ ಬೆದರಿಕೆ ಒಡ್ಡಿರುತ್ತಾರೆ ಮತ್ತು ಈ ಬಗ್ಗೆ ಬೇರೆಯವರಿಗೆ ತಿಳಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಪಡಿಸುವುದಾಗಿ ಬೆದರಿಸಿರುತ್ತಾರೆ ಎಂದು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದು, ಆರೋಪಿಗಳನ್ನು ವಶಪಡಿಸುವಲ್ಲಿ ತಂಡಗಳು ಯಶಸ್ವಿಯಾಗಿರುತ್ತದೆ.
ಆರೋಪಿಗಳು
ಬಜತ್ತೂರು ಗ್ರಾಮದ ಗಾಣದಮೂಲೆ ಮನೆಯ ರಾಧಾಕೃಷ್ಣ ಎಂಬವರ ಪುತ್ರ ಗುರುನಂದನ್ (19),
ಪೆರ್ನೆ ಗ್ರಾಮದ ರಾಜಶ್ರೀ ಕೃಪದ ನಾಗೇಶ್ ನಾಯ್ಕ ಅವರ ಪುತ್ರ ಪ್ರಜ್ವಲ್ (19) ,
ಪೆರ್ನೆ ಗ್ರಾಮದ ಕಡಂಬು ಮನೆ ಸದಾಶಿವ ಅವರ ಪುತ್ರ ಕಿಶನ್(19) ,
ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಪಿಲಿಗುಂಡ ಮನೆಯ ಕಾಂತಪ್ಪ ಗೌಡರ ಪುತ್ರ ಸುನಿಲ್ (19) ,
ಬರಿಮಾರು ಗ್ರಾಮದ ಬಲ್ಯ ಮನೆ ಸುಬ್ಬಣ್ಣ ಶೆಟ್ಟಿ ಅವರ ಪುತ್ರ ಪ್ರಖ್ಯಾತ್(19),
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…
ವಿವೇಕಾನಂದ ಎಚ್ ಕೆ ಅವರ ಬರಹ
ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್ ಆಳ್ವ ಅವರು ಬರೆದಿದ್ದಾರೆ.