Advertisement
ಅಪರಾಧ

ಪುತ್ತೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ : ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

Share

ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ನಡೆಸಿದ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳ  ವಿರುದ್ಧ ಪ್ರಕರಣ ದಾಖಲಾಗಿದೆ.  ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಈ ಕೃತ್ಯ ನಡೆಸಿದ್ದಾರೆ.

ಮಾರ್ಚ್ ತಿಂಗಳ ಕೊನೆಯ ವಾರ ಮದ್ಯಾಹ್ನ 3.00 ಗಂಟೆಗೆ ವಿದ್ಯಾರ್ಥಿನಿಯೊಬ್ಬಳ ಜೊತೆ ಕಾಲೇಜಿನ ಸುನಿಲ್ ಎಂಬಾತನು  ಮಾತನಾಡಲಿಕ್ಕಿದೆ ಎಂದು ಕಾರಿನಲ್ಲಿ ಕುಳ್ಳಿರಿಸಿ, ಪ್ರಜ್ವಲ್, ಪ್ರಕೃತ್ ಎಂಬವರನ್ನು ಕೂಡಿಕೊಂಡು ಕಾರಿನಲ್ಲಿ ಚಾಲಕನೊಂದಿಗೆ ಜೊತೆಯಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ  4 ರಿಂದ 5 ಜನ ಆರೋಪಿಗಳು  ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುತ್ತಾರೆ ಹಾಗೂ ಈ ವಿಚಾರವನ್ನು ಮುಂದಕ್ಕೆ ಯಾರಲ್ಲಿಯೂ ಹೇಳದಂತೆ ಜೀವ ಬೆದರಿಕೆ ಒಡ್ಡಿರುತ್ತಾರೆ ಮತ್ತು ಈ ಬಗ್ಗೆ ಬೇರೆಯವರಿಗೆ ತಿಳಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಪಡಿಸುವುದಾಗಿ ಬೆದರಿಸಿರುತ್ತಾರೆ ಎಂದು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಈ ಬಗ್ಗೆ  ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಿಲ್ಲಾ ಪೊಲೀಸ್ ಅಧೀಕ್ಷಕರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದು,  ಆರೋಪಿಗಳನ್ನು ವಶಪಡಿಸುವಲ್ಲಿ ತಂಡಗಳು ಯಶಸ್ವಿಯಾಗಿರುತ್ತದೆ.

ಆರೋಪಿಗಳು

ಬಜತ್ತೂರು ಗ್ರಾಮದ  ಗಾಣದಮೂಲೆ ಮನೆಯ ರಾಧಾಕೃಷ್ಣ ಎಂಬವರ ಪುತ್ರ ಗುರುನಂದನ್ (19),

ಪೆರ್ನೆ ಗ್ರಾಮದ ರಾಜಶ್ರೀ ಕೃಪದ ನಾಗೇಶ್ ನಾಯ್ಕ ಅವರ ಪುತ್ರ ಪ್ರಜ್ವಲ್ (19) ,

ಪೆರ್ನೆ ಗ್ರಾಮದ ಕಡಂಬು ಮನೆ ಸದಾಶಿವ ಅವರ ಪುತ್ರ ಕಿಶನ್(19) , 

ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಪಿಲಿಗುಂಡ ಮನೆಯ ಕಾಂತಪ್ಪ ಗೌಡರ ಪುತ್ರ ಸುನಿಲ್ (19) ,

ಬರಿಮಾರು ಗ್ರಾಮದ ಬಲ್ಯ ಮನೆ ಸುಬ್ಬಣ್ಣ ಶೆಟ್ಟಿ ಅವರ ಪುತ್ರ ಪ್ರಖ್ಯಾತ್(19),

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

34 minutes ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

13 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

23 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 day ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

2 days ago