ಪುತ್ತೂರು: ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಮಗ್ರ ತನಿಖೆಗೆ ನಡೆಸಿ ಕಠಿಣ ಕ್ರಮ ನಡೆಸಲು ಆಗ್ರಹಿಸಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ಘಟಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪುತ್ತುರು ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣರವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಎಬಿವಿಪಿ ಆಗ್ರಹಿಸಿದೆ. ಈ ಪ್ರಕರಣವನ್ನು ಮುಂದಿಟ್ಟು ಕೆಲವು ಕಿಡಿಗೇಡಿಗಳು ಆರೋಪಿ ಎಬಿವಿಪಿ ಕಾರ್ಯಕರ್ತರು ಎಂಬ ಅಪಪ್ರಚಾರವನ್ನು ಮಾಡುತ್ತಿರುವುದು ಕಂಡುಬಂದಿದೆ> ಈ ಪ್ರಕರಣ ಆರೋಪಿಗಳಿಗೂ ಎಬಿವಿಪಿಗೂ ಸಂಬಂಧವಿಲ್ಲ. ಹೀಗಿದ್ದರೂ ಆರೋಪಿಗಳ ಜೊತೆ ಸಂಘಟನೆಯ ಹೆಸರನ್ನು ಸೇರಿಸಿ ಅಪಪ್ರಚಾರ ನಡೆಸುವುದರಿಂದ ಸಂಘಟನೆಯ ಘನತೆಗೆ ಧಕ್ಕೆ ಬಂದಿದೆ. ಇಲಾಖೆ ಈ ಕೂಡಲೇ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಶಿವಪ್ರಸಾದ್ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.
ಪುತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ಖಂಡಿಸುತ್ತೇವೆ ಮತ್ತು ಅತ್ಯಾಚಾರಿಗಳ ವಿರುದ್ಧ ಕಠಿನ ಶಿಕ್ಷೆಗೆ ಆಗ್ರಹಿಸುತ್ತೇವೆ ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…