ಪುತ್ತೂರಿನಲ್ಲಿ ಹಲಸು ಸಾರ ಮೇಳ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಹಲಸಿನ ತಳಿ ಅಭಿವೃದ್ಧಿಗೆ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಶ್ರಮಿಸುತ್ತಿದೆ. ಅದರ ಜೊತೆಗೆ ಹಲಸಿನ ಮೌಲ್ಯವರ್ಧನೆ ಕಡೆಗೂ ಆಸಕ್ತವಾಗಿದ್ದು ಈಗಾಗಲೇ ತರಬೇತಿ ನೀಡಿ ಸಹಾಯ ಮಾಡುವ ಕೆಲಸ ಮಾಡುತ್ತಿದೆ ಎಂದು ಎಂದು ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ದಿನೇಶ್ ಹೇಳಿದರು.

Advertisement

ಅವರು ಶನಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ಪುತ್ತೂರು ಹಲಸು ಸ್ನೇಹ ಸಂಗಮ, ಬೆಂಗಳೂರಿನ ಐಎಚ್‍ಆರ್ ಮತ್ತು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯ, ಪುತ್ತೂರು ಜೆಸಿಐ ನೇತೃತ್ವದಲ್ಲಿ ವಿವಿಧ  ಸಂಘ ಸಂಸ್ಥೆಗಳ ವತಿಯಿಂದ 2 ದಿನಗಳ ಕಾಲ ನಡೆಯಲಿರುವ ಹಲಸು ಸಾರ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಈಗಾಗಲೇ ಯುವಕರಿಗೆ ತರಬೇತಿ ನೀಡುವ ಕಾರ್ಯ ಮಾಡಿದೆ. ಇದರ ಫಲವಾಗಿ ಯುವಕರು ವಾರ್ಷಿಕವಾಗಿ 7 ರಿಂದ 8 ಲಕ್ಷ ಆದಾಯ ಪಡೆಯುತ್ತಿದ್ದಾರೆ ಎಂದ ಅವರು ಹಲಸು ತಳಿ ವೈವಿಧ್ಯತೆ ಆದ್ಯತೆ ನೀಡಲಾಗುತ್ತಿದೆ. ರೈತರೂ ಮುಂದೆ ಬಂದರೆ ಇನ್ನಷ್ಟು ಅಭಿವೃದ್ಧಿ ಮಾಡಲು ಸಾಧ್ಯವಿದೆ. ಕೃಷಿ ಉದ್ಯಮವಾಗಲು, ಕೃಷಿಕನೇ ಆಸಕ್ತಿ ವಹಿಸಬೇಕು. ಕೃಷಿ ಉದ್ಯಮವಾಗಲು ತರಬೇತಿಯೂ ಅಗತ್ಯ ಎಂದು ಹೇಳಿದರು.

ದಿಕ್ಸೂಚಿ ಭಾಷಣ ಮಾಡಿದ ಆಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸ್ ಆಚಾರ್, ಕೃಷಿ ಅಭಿವೃದ್ಧಿಗೆ ಜನರೇ ಇಲ್ಲದ ಸ್ಥಿತಿ ಇದೆ. ಹೀಗಿರುವಾಗ ಆದಾಯ ದ್ವಿಗುಣವಾಗಬೇಕಾದ ಅನಿವಾರ್ಯತೆ ಇಂದಿದೆ. ಅಡಿಕೆಗೆ ಇಲ್ಲಿ ಪ್ರಾಮುಖ್ಯತೆ ಇದ್ದರೂ ಮುಂದಿನ ದಿನಗಳಲ್ಲಿ ಜನರ ಹಸಿವು ನೀಗಿಸುವ ಕೃಷಿ ಉಪನ್ನಗಳನ್ನು ಬೆಳೆಸುವ ಕೃಷಿ ಪದ್ದತಿಯನ್ನು ನಾವು ಅನುಷ್ಠಾನಗೊಳಿಸಬೇಕಾಗಿದೆ. ಹಲಸಿನ ಕೃಷಿಗೆ ಮನಸ್ಸು ಮಾಡಬೇಕಾಗಿದೆ ಎಂದರು.

ಅಡಿಕೆ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಮಾತನಾಡಿ ಹಲಸಿನ ಹಣ್ಣಿನ ಕುರಿತು ಕರ್ನಾಟಕದ ಜನರಲ್ಲಿರುವ ಕೀಳರಿಮೆ ದೂರವಾಗಬೇಕು. ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿರುವ ಜಿಲ್ಲೆಯಲ್ಲಿ ಕೃಷಿಕರು ಹಲಸಿನ ಬೆಳೆಯತ್ತ ಗಮನಹರಿಸಿದರೆ ಹಲಸು ಖಂಡಿತವಾಗಿಯೂ ರೈತನ ಕೈ ಹಿಡಿಯುತ್ತದೆ ಎಂದರು.

ಮುಳಿಯ ಜ್ಯುವೆಲ್ಸ್‍ನ ಕೃಷ್ಣನಾರಾಯನ ಮುಳಿಯ ಮಾತನಾಡಿ, ಹಲಸು ಬೆಳೆಯುವುದರ ಜೊತೆಗೆ ಮಾರುಕಟ್ಟೆ ಹಾಗೂ ಬಳಕೆ ಕಡೆಗೂ ಆಸಕ್ತಿವಹಿಸಬೇಕು ಎಂದರು. ಹಲಸು ರಫ್ತು ಕಡೆಗೆ ಗುಂಪಾಗಿ ಯೋಚನೆ ಮಾಡಬಹುದು ಎಂದರು.

ಹಲಸು ಸ್ನೇಹ ಸಂಗಮದ ಅಧ್ಯಕ್ಷ ಸೇಡಿಯಾಪು ಜನಾರ್ಧನ ಭಟ್ ಸಭಾಧ್ಯಕ್ಷತೆ ವಹಿಸಿದ್ದರು.

ಪುತ್ತೂರಿನ ನವಚೇತನ ಸ್ನೇಹ ಸಂಗಮದ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಪ್ರಸ್ತಾವನೆಗೈದರು. ಪುತ್ತೂರು ಜೇಸಿಐ ಅಧ್ಯಕ್ಷ ಗೌತಮ ರೈ ಸ್ವಾಗತಿಸಿ, ಹಲಸು ಸ್ನೇಹ ಸಂಗಮದ ಕಾರ್ಯದರ್ಶಿ ಸುಹಾಸ್ ಎ.ಪಿ. ಮರಿಕೆ ವಂದಿಸಿದರು. ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

13 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

13 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

1 day ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

2 days ago