ಪುತ್ತೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿ ಮತ್ತೆ 8 ಜನರನ್ನು ಬಂಧಿಸಲಾಗಿದೆ.
ಈ ಬಗ್ಗೆ ಪೊಲೀಸರು ನಡೆಸಿದ ತನಿಖೆಯ ವರದಿ ಹೀಗಿದೆ, ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾದ ಪ್ರಖ್ಯಾತ ಎಂಬಾತನು ತಾನು ತನ್ನ ಸ್ನೇಹಿತರೊಂದಿಗೆ ಸೇರಿ ನಡೆಸಿರುವ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ತನ್ನ ಮೊಬೈಲ್ ನ ಒಂದು ಅ್ಯಪ್ ನಲ್ಲಿ ಸ್ಟೇಟಸ್ ಹಾಕಿ ಕೊಂಡಿದ್ದು ಈ ವಿಡಿಯೋವನ್ನು ಅದೇ ಕಾಲೇಜಿನ ಮೋಹಿತ್ ಎಂಬಾತನು ತನ್ನ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡಿರುತ್ತಾನೆ. ಕಾಲೇಜಿನ ವಿದ್ಯಾರ್ಥಿಗಳ ಚುನಾವಣೆ ಸಮಯ ಗುಂಪು-ಗುಂಪುಗಳಾಗಿ ವಿದ್ಯಾರ್ಥಿಗಳು ವೈಷಮ್ಯ ಬೆಳೆಸಿಕೊಂಡಿರುತ್ತಾರೆ. ಒಂದು ಗುಂಪಿನಲ್ಲಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಕೆಲವರ ತೇಜೋವಧೆ ಮಾಡುವ ಉದ್ದೇಶದಿಂದ ಶ್ರೇಯಾಂಸ್ ಎಸ್ ಎಂಬಾತನು ತನಗೆ ಬೇರೆಯವರ ಮೂಲಕ ದೊರೆತ ಈ ವಿಡಿಯೋವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಮಾಡಿರುವುದಾಗಿದೆ. ಈ ಪ್ರಕರಣದಲ್ಲಿ ವಿಡಿಯೋ ವನ್ನು ಸಾರ್ವಜನಿಕವಾಗಿ ಪ್ರಸಾರ ಪಡಿಸಿದ ಆರೋಪದಲ್ಲಿ ಮತ್ತೆ 8 ಜನರನ್ನು ಬಂಧಿಸಲಾಗಿದೆ.
ಮತ್ತೆ ಬಂಧಿಸಿದ ಆರೋಪಿಗಳು ಮುರಳೀಧರ, ಚಂದ್ರಶೇಖರ ಮಯ್ಯ, ಶ್ರೇಯಾಂಸ್, ಪೂವಪ್ಪ ಕೆ, ಪವನ್ ಕುಮಾರ್ ಡಿ, ಮೋಹಿತ್ ಪಿ ಜಿ, ಧ್ಯಾನ್ ಎ ಎನ್, ಅದ್ವಿತ್ ಕುಮಾರ್ ನಾಯ್ಕ್ ಎಂಬವರುಗಳನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…