ಪುತ್ತೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿ ಮತ್ತೆ 8 ಜನರನ್ನು ಬಂಧಿಸಲಾಗಿದೆ.
ಈ ಬಗ್ಗೆ ಪೊಲೀಸರು ನಡೆಸಿದ ತನಿಖೆಯ ವರದಿ ಹೀಗಿದೆ, ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾದ ಪ್ರಖ್ಯಾತ ಎಂಬಾತನು ತಾನು ತನ್ನ ಸ್ನೇಹಿತರೊಂದಿಗೆ ಸೇರಿ ನಡೆಸಿರುವ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ತನ್ನ ಮೊಬೈಲ್ ನ ಒಂದು ಅ್ಯಪ್ ನಲ್ಲಿ ಸ್ಟೇಟಸ್ ಹಾಕಿ ಕೊಂಡಿದ್ದು ಈ ವಿಡಿಯೋವನ್ನು ಅದೇ ಕಾಲೇಜಿನ ಮೋಹಿತ್ ಎಂಬಾತನು ತನ್ನ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡಿರುತ್ತಾನೆ. ಕಾಲೇಜಿನ ವಿದ್ಯಾರ್ಥಿಗಳ ಚುನಾವಣೆ ಸಮಯ ಗುಂಪು-ಗುಂಪುಗಳಾಗಿ ವಿದ್ಯಾರ್ಥಿಗಳು ವೈಷಮ್ಯ ಬೆಳೆಸಿಕೊಂಡಿರುತ್ತಾರೆ. ಒಂದು ಗುಂಪಿನಲ್ಲಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಕೆಲವರ ತೇಜೋವಧೆ ಮಾಡುವ ಉದ್ದೇಶದಿಂದ ಶ್ರೇಯಾಂಸ್ ಎಸ್ ಎಂಬಾತನು ತನಗೆ ಬೇರೆಯವರ ಮೂಲಕ ದೊರೆತ ಈ ವಿಡಿಯೋವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಮಾಡಿರುವುದಾಗಿದೆ. ಈ ಪ್ರಕರಣದಲ್ಲಿ ವಿಡಿಯೋ ವನ್ನು ಸಾರ್ವಜನಿಕವಾಗಿ ಪ್ರಸಾರ ಪಡಿಸಿದ ಆರೋಪದಲ್ಲಿ ಮತ್ತೆ 8 ಜನರನ್ನು ಬಂಧಿಸಲಾಗಿದೆ.
ಮತ್ತೆ ಬಂಧಿಸಿದ ಆರೋಪಿಗಳು ಮುರಳೀಧರ, ಚಂದ್ರಶೇಖರ ಮಯ್ಯ, ಶ್ರೇಯಾಂಸ್, ಪೂವಪ್ಪ ಕೆ, ಪವನ್ ಕುಮಾರ್ ಡಿ, ಮೋಹಿತ್ ಪಿ ಜಿ, ಧ್ಯಾನ್ ಎ ಎನ್, ಅದ್ವಿತ್ ಕುಮಾರ್ ನಾಯ್ಕ್ ಎಂಬವರುಗಳನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…