Advertisement
ಅಪರಾಧ

ಪುತ್ತೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಬಹಿರಂಗವಾದ್ದು ಹೇಗೆ ?

Share

ಪುತ್ತೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿ ಮತ್ತೆ 8 ಜನರನ್ನು ಬಂಧಿಸಲಾಗಿದೆ.

ಈ ಬಗ್ಗೆ ಪೊಲೀಸರು ನಡೆಸಿದ ತನಿಖೆಯ ವರದಿ ಹೀಗಿದೆ, ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾದ  ಪ್ರಖ್ಯಾತ ಎಂಬಾತನು ತಾನು ತನ್ನ ಸ್ನೇಹಿತರೊಂದಿಗೆ ಸೇರಿ ನಡೆಸಿರುವ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ತನ್ನ ಮೊಬೈಲ್ ನ ಒಂದು ಅ್ಯಪ್ ನಲ್ಲಿ ಸ್ಟೇಟಸ್ ಹಾಕಿ ಕೊಂಡಿದ್ದು ಈ ವಿಡಿಯೋವನ್ನು ಅದೇ ಕಾಲೇಜಿನ ಮೋಹಿತ್‌ ಎಂಬಾತನು ತನ್ನ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡಿರುತ್ತಾನೆ. ಕಾಲೇಜಿನ ವಿದ್ಯಾರ್ಥಿಗಳ ಚುನಾವಣೆ ಸಮಯ ಗುಂಪು-ಗುಂಪುಗಳಾಗಿ ವಿದ್ಯಾರ್ಥಿಗಳು ವೈಷಮ್ಯ ಬೆಳೆಸಿಕೊಂಡಿರುತ್ತಾರೆ. ಒಂದು ಗುಂಪಿನಲ್ಲಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಕೆಲವರ ತೇಜೋವಧೆ ಮಾಡುವ ಉದ್ದೇಶದಿಂದ ಶ್ರೇಯಾಂಸ್  ಎಸ್ ಎಂಬಾತನು ತನಗೆ ಬೇರೆಯವರ ಮೂಲಕ ದೊರೆತ ಈ ವಿಡಿಯೋವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಮಾಡಿರುವುದಾಗಿದೆ. ಈ ಪ್ರಕರಣದಲ್ಲಿ ವಿಡಿಯೋ ವನ್ನು ಸಾರ್ವಜನಿಕವಾಗಿ ಪ್ರಸಾರ ಪಡಿಸಿದ ಆರೋಪದಲ್ಲಿ ಮತ್ತೆ 8 ಜನರನ್ನು  ಬಂಧಿಸಲಾಗಿದೆ.

ಮತ್ತೆ ಬಂಧಿಸಿದ ಆರೋಪಿಗಳು ಮುರಳೀಧರ, ಚಂದ್ರಶೇಖರ ಮಯ್ಯ, ಶ್ರೇಯಾಂಸ್,  ಪೂವಪ್ಪ ಕೆ, ಪವನ್ ಕುಮಾರ್ ಡಿ, ಮೋಹಿತ್‌ ಪಿ ಜಿ, ಧ್ಯಾನ್‌ ಎ ಎನ್‌, ಅದ್ವಿತ್‌ ಕುಮಾರ್‌ ನಾಯ್ಕ್‌ ಎಂಬವರುಗಳನ್ನು  ಪೊಲೀಸರು ದಸ್ತಗಿರಿ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

10 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

10 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago