Advertisement
ಅಪರಾಧ

ಪುತ್ತೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಬಹಿರಂಗವಾದ್ದು ಹೇಗೆ ?

Share

ಪುತ್ತೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿ ಮತ್ತೆ 8 ಜನರನ್ನು ಬಂಧಿಸಲಾಗಿದೆ.

ಈ ಬಗ್ಗೆ ಪೊಲೀಸರು ನಡೆಸಿದ ತನಿಖೆಯ ವರದಿ ಹೀಗಿದೆ, ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾದ  ಪ್ರಖ್ಯಾತ ಎಂಬಾತನು ತಾನು ತನ್ನ ಸ್ನೇಹಿತರೊಂದಿಗೆ ಸೇರಿ ನಡೆಸಿರುವ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ತನ್ನ ಮೊಬೈಲ್ ನ ಒಂದು ಅ್ಯಪ್ ನಲ್ಲಿ ಸ್ಟೇಟಸ್ ಹಾಕಿ ಕೊಂಡಿದ್ದು ಈ ವಿಡಿಯೋವನ್ನು ಅದೇ ಕಾಲೇಜಿನ ಮೋಹಿತ್‌ ಎಂಬಾತನು ತನ್ನ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡಿರುತ್ತಾನೆ. ಕಾಲೇಜಿನ ವಿದ್ಯಾರ್ಥಿಗಳ ಚುನಾವಣೆ ಸಮಯ ಗುಂಪು-ಗುಂಪುಗಳಾಗಿ ವಿದ್ಯಾರ್ಥಿಗಳು ವೈಷಮ್ಯ ಬೆಳೆಸಿಕೊಂಡಿರುತ್ತಾರೆ. ಒಂದು ಗುಂಪಿನಲ್ಲಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಕೆಲವರ ತೇಜೋವಧೆ ಮಾಡುವ ಉದ್ದೇಶದಿಂದ ಶ್ರೇಯಾಂಸ್  ಎಸ್ ಎಂಬಾತನು ತನಗೆ ಬೇರೆಯವರ ಮೂಲಕ ದೊರೆತ ಈ ವಿಡಿಯೋವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಮಾಡಿರುವುದಾಗಿದೆ. ಈ ಪ್ರಕರಣದಲ್ಲಿ ವಿಡಿಯೋ ವನ್ನು ಸಾರ್ವಜನಿಕವಾಗಿ ಪ್ರಸಾರ ಪಡಿಸಿದ ಆರೋಪದಲ್ಲಿ ಮತ್ತೆ 8 ಜನರನ್ನು  ಬಂಧಿಸಲಾಗಿದೆ.

ಮತ್ತೆ ಬಂಧಿಸಿದ ಆರೋಪಿಗಳು ಮುರಳೀಧರ, ಚಂದ್ರಶೇಖರ ಮಯ್ಯ, ಶ್ರೇಯಾಂಸ್,  ಪೂವಪ್ಪ ಕೆ, ಪವನ್ ಕುಮಾರ್ ಡಿ, ಮೋಹಿತ್‌ ಪಿ ಜಿ, ಧ್ಯಾನ್‌ ಎ ಎನ್‌, ಅದ್ವಿತ್‌ ಕುಮಾರ್‌ ನಾಯ್ಕ್‌ ಎಂಬವರುಗಳನ್ನು  ಪೊಲೀಸರು ದಸ್ತಗಿರಿ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago