ಪುತ್ತೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿ ಮತ್ತೆ 8 ಜನರನ್ನು ಬಂಧಿಸಲಾಗಿದೆ.
ಈ ಬಗ್ಗೆ ಪೊಲೀಸರು ನಡೆಸಿದ ತನಿಖೆಯ ವರದಿ ಹೀಗಿದೆ, ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾದ ಪ್ರಖ್ಯಾತ ಎಂಬಾತನು ತಾನು ತನ್ನ ಸ್ನೇಹಿತರೊಂದಿಗೆ ಸೇರಿ ನಡೆಸಿರುವ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ತನ್ನ ಮೊಬೈಲ್ ನ ಒಂದು ಅ್ಯಪ್ ನಲ್ಲಿ ಸ್ಟೇಟಸ್ ಹಾಕಿ ಕೊಂಡಿದ್ದು ಈ ವಿಡಿಯೋವನ್ನು ಅದೇ ಕಾಲೇಜಿನ ಮೋಹಿತ್ ಎಂಬಾತನು ತನ್ನ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡಿರುತ್ತಾನೆ. ಕಾಲೇಜಿನ ವಿದ್ಯಾರ್ಥಿಗಳ ಚುನಾವಣೆ ಸಮಯ ಗುಂಪು-ಗುಂಪುಗಳಾಗಿ ವಿದ್ಯಾರ್ಥಿಗಳು ವೈಷಮ್ಯ ಬೆಳೆಸಿಕೊಂಡಿರುತ್ತಾರೆ. ಒಂದು ಗುಂಪಿನಲ್ಲಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಕೆಲವರ ತೇಜೋವಧೆ ಮಾಡುವ ಉದ್ದೇಶದಿಂದ ಶ್ರೇಯಾಂಸ್ ಎಸ್ ಎಂಬಾತನು ತನಗೆ ಬೇರೆಯವರ ಮೂಲಕ ದೊರೆತ ಈ ವಿಡಿಯೋವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಮಾಡಿರುವುದಾಗಿದೆ. ಈ ಪ್ರಕರಣದಲ್ಲಿ ವಿಡಿಯೋ ವನ್ನು ಸಾರ್ವಜನಿಕವಾಗಿ ಪ್ರಸಾರ ಪಡಿಸಿದ ಆರೋಪದಲ್ಲಿ ಮತ್ತೆ 8 ಜನರನ್ನು ಬಂಧಿಸಲಾಗಿದೆ.
ಮತ್ತೆ ಬಂಧಿಸಿದ ಆರೋಪಿಗಳು ಮುರಳೀಧರ, ಚಂದ್ರಶೇಖರ ಮಯ್ಯ, ಶ್ರೇಯಾಂಸ್, ಪೂವಪ್ಪ ಕೆ, ಪವನ್ ಕುಮಾರ್ ಡಿ, ಮೋಹಿತ್ ಪಿ ಜಿ, ಧ್ಯಾನ್ ಎ ಎನ್, ಅದ್ವಿತ್ ಕುಮಾರ್ ನಾಯ್ಕ್ ಎಂಬವರುಗಳನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…