Advertisement
ಸುದ್ದಿಗಳು

ಪುತ್ತೂರು ಎಪಿಎಂಸಿ ರೈಲ್ವೇ ಅಂಡರ್‌ಪಾಸ್ ಕಾಮಗಾರಿಗೆ ಮೂಲ ಸೌಕರ್ಯ ನಿಧಿಯಿಂದ ಅನುದಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆಗೆ ಮನವಿ

Share

ಸವಣೂರು : ಎಪಿಎಂಸಿ ರೈಲ್ವೇ ಅಂಡರ್‌ಪಾಸ್ ಕಾಮಗಾರಿಗೆ ಮೂಲ ಸೌಕರ್ಯ ನಿಽಯಿಂದ ಅನುದಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಚಾರ್ವಾಕದ ಅವರ ಮನೆಯಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಮನವಿ ಸಲ್ಲಿಸಿದರು.

ಪುತ್ತೂರು ಎಪಿಎಂಸಿ ರಸ್ತೆಯಲ್ಲಿ ರೈಲ್ವೇ ಅಂಡರ್‌ಪಾಸ್ ನಿರ್ಮಾಣಕ್ಕೆ ಈಗಾಗಲೇ 12.70 ಕೋಟಿಯ ಕ್ರಿಯಾಯೋಜನೆ ತಯಾರಿಸಲಾಗಿದ್ದು, ರೈಲ್ವೇ ಇಲಾಖೆ ಹಾಗೂ ಎಪಿಎಂಸಿ 50:50 ಯಂತೆ ಅನುದಾನ ಭರಿಸುವ ಕುರಿತು ಈಗಾಗಲೇ ಅಂದಾಜು ಪಟ್ಟಿ ಮಾಡಲಾಗಿದೆ. ಇದರಿಂದಾಗಿ ರೈಲ್ವೇ ಇಲಾಖೆ 6.35 ಕೋಟಿ ವೆಚ್ಚ ನೀಡಲಿದ್ದು,ಉಳಿದ 6.35 ಕೋಟಿ ರೂಗಳನ್ನು ಎಪಿಎಂಸಿ ಭರಿಸಬೇಕಾಗಿದೆ. ಈ ಕುರಿತು ಈಗಾಗಲೇ ಎಪಿಎಂಸಿ ವತಿಯಿಂದ ಪುತ್ತೂರು ನಗರ ಸಭೆ ,ಶಾಸಕರಿಗೆ,ಸಂಸದರಿಗೆ ಮನವಿ ಮಾಡಲಾಗಿದೆ.ಇದಕ್ಕಾಗಿ ಸರಕಾರದ ಮೂಲ ಸೌಕರ್ಯ ನಿಧಿಯಿಂದ ರೂ 5 ಕೋಟಿ ಅನುದಾನ ನೀಡುವಂತೆ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅವರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿದರು.

ಅಲ್ಲದೆ ಕಾಮಗಾರಿ ತ್ವರಿತವಾಗಿ ಆರಂಭಿಸಲು ರೈಲ್ವೇ ಇಲಾಖೆಯ ಡಿ.ಆರ್.ಎಂ ಅಪರ್ಣಾ ಗಾರ್ಗ್ ಅವರಿಗೆ ಶೋಭಾ ಕರಂದ್ಲಾಜೆ ಅವರು ದೂರವಾಣಿ ಮೂಲಕ ತಿಳಿಸಿದರು.

ಮರಳು ಸಮಸ್ಯೆ ಪರಿಹಾರಕ್ಕೆ ಸಭೆ:  ಅಲ್ಲದೆ ಸರಕಾರದ ಮರಳು ನೀತಿಯಿಂದ ಜನತೆಗೆ ಸಮಸ್ಯೆಯಾಗಿದೆ.ಮನೆ ಹಾಗೂ ಯಾವುದೇ ಕಾಮಗಾರಿ ನಡೆಸಲು ಸಾಧ್ಯವಾಗದ ಸ್ಥಿತಿ ಇದೆ. ನಾನ್ ಸಿಆರ್‌ಝೆಡ್ ನವರಿಗೂ ಮರಳು ತೆಗೆಯಲು ಅವಕಾಶ ನೀಡುವ ಕುರಿತು ಸಚಿವರೊಂದಿಗೆ ಸಭೆ ನಡೆಸುವಂತೆಯೂ ಸಂಸದರಿಗೆ ದಿನೇಶ್ ಮೆದು ಮನವಿಮಾಡಿದರು.

ಪ್ರತಿಕ್ರಿಯೆ ನೀಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು ದ.ಕ.ಸಂಸದ ನಳಿನ್ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ಜತೆಗೂಡಿ ಮುಖ್ಯಮಂತ್ರಿ ಹಾಗೂ ಗಣಿ,ಭೂ ವಿಜ್ಞಾನ ಇಲಾಖೆಯ ಸಚಿವರ ಜತೆ ಸಭೆ ನಡೆಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು .ಮರಳು ಸಮಸ್ಯೆ ಸರಪಡಿಸಲು ಶ್ರಮಿಸಲಾಗುವುದು ಎಂದರು.

ಈ ಸಂದರ್ಭ ಸವಣೂರು ಗ್ರಾ.ಪಂ.ಸದಸ್ಯ ಪ್ರಕಾಶ್ ಕುದ್ಮನಮಜಲು, ಸ್ಥಳೀಯರಾದ ತೀರ್ಥರಾಮ ಕೆಡೆಂಜಿ,ಬೆಳಿಯಪ್ಪ ಗೌಡ ಚೌಕಿಮಠ ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

16 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

17 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

20 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

24 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago