Advertisement
ಸುದ್ದಿಗಳು

ಪುತ್ತೂರು ಎಪಿಎಂಸಿ ರೈಲ್ವೇ ಅಂಡರ್‌ಪಾಸ್ ಕಾಮಗಾರಿಗೆ ಮೂಲ ಸೌಕರ್ಯ ನಿಧಿಯಿಂದ ಅನುದಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆಗೆ ಮನವಿ

Share

ಸವಣೂರು : ಎಪಿಎಂಸಿ ರೈಲ್ವೇ ಅಂಡರ್‌ಪಾಸ್ ಕಾಮಗಾರಿಗೆ ಮೂಲ ಸೌಕರ್ಯ ನಿಽಯಿಂದ ಅನುದಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಚಾರ್ವಾಕದ ಅವರ ಮನೆಯಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಮನವಿ ಸಲ್ಲಿಸಿದರು.

ಪುತ್ತೂರು ಎಪಿಎಂಸಿ ರಸ್ತೆಯಲ್ಲಿ ರೈಲ್ವೇ ಅಂಡರ್‌ಪಾಸ್ ನಿರ್ಮಾಣಕ್ಕೆ ಈಗಾಗಲೇ 12.70 ಕೋಟಿಯ ಕ್ರಿಯಾಯೋಜನೆ ತಯಾರಿಸಲಾಗಿದ್ದು, ರೈಲ್ವೇ ಇಲಾಖೆ ಹಾಗೂ ಎಪಿಎಂಸಿ 50:50 ಯಂತೆ ಅನುದಾನ ಭರಿಸುವ ಕುರಿತು ಈಗಾಗಲೇ ಅಂದಾಜು ಪಟ್ಟಿ ಮಾಡಲಾಗಿದೆ. ಇದರಿಂದಾಗಿ ರೈಲ್ವೇ ಇಲಾಖೆ 6.35 ಕೋಟಿ ವೆಚ್ಚ ನೀಡಲಿದ್ದು,ಉಳಿದ 6.35 ಕೋಟಿ ರೂಗಳನ್ನು ಎಪಿಎಂಸಿ ಭರಿಸಬೇಕಾಗಿದೆ. ಈ ಕುರಿತು ಈಗಾಗಲೇ ಎಪಿಎಂಸಿ ವತಿಯಿಂದ ಪುತ್ತೂರು ನಗರ ಸಭೆ ,ಶಾಸಕರಿಗೆ,ಸಂಸದರಿಗೆ ಮನವಿ ಮಾಡಲಾಗಿದೆ.ಇದಕ್ಕಾಗಿ ಸರಕಾರದ ಮೂಲ ಸೌಕರ್ಯ ನಿಧಿಯಿಂದ ರೂ 5 ಕೋಟಿ ಅನುದಾನ ನೀಡುವಂತೆ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅವರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿದರು.

ಅಲ್ಲದೆ ಕಾಮಗಾರಿ ತ್ವರಿತವಾಗಿ ಆರಂಭಿಸಲು ರೈಲ್ವೇ ಇಲಾಖೆಯ ಡಿ.ಆರ್.ಎಂ ಅಪರ್ಣಾ ಗಾರ್ಗ್ ಅವರಿಗೆ ಶೋಭಾ ಕರಂದ್ಲಾಜೆ ಅವರು ದೂರವಾಣಿ ಮೂಲಕ ತಿಳಿಸಿದರು.

ಮರಳು ಸಮಸ್ಯೆ ಪರಿಹಾರಕ್ಕೆ ಸಭೆ:  ಅಲ್ಲದೆ ಸರಕಾರದ ಮರಳು ನೀತಿಯಿಂದ ಜನತೆಗೆ ಸಮಸ್ಯೆಯಾಗಿದೆ.ಮನೆ ಹಾಗೂ ಯಾವುದೇ ಕಾಮಗಾರಿ ನಡೆಸಲು ಸಾಧ್ಯವಾಗದ ಸ್ಥಿತಿ ಇದೆ. ನಾನ್ ಸಿಆರ್‌ಝೆಡ್ ನವರಿಗೂ ಮರಳು ತೆಗೆಯಲು ಅವಕಾಶ ನೀಡುವ ಕುರಿತು ಸಚಿವರೊಂದಿಗೆ ಸಭೆ ನಡೆಸುವಂತೆಯೂ ಸಂಸದರಿಗೆ ದಿನೇಶ್ ಮೆದು ಮನವಿಮಾಡಿದರು.

ಪ್ರತಿಕ್ರಿಯೆ ನೀಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು ದ.ಕ.ಸಂಸದ ನಳಿನ್ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ಜತೆಗೂಡಿ ಮುಖ್ಯಮಂತ್ರಿ ಹಾಗೂ ಗಣಿ,ಭೂ ವಿಜ್ಞಾನ ಇಲಾಖೆಯ ಸಚಿವರ ಜತೆ ಸಭೆ ನಡೆಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು .ಮರಳು ಸಮಸ್ಯೆ ಸರಪಡಿಸಲು ಶ್ರಮಿಸಲಾಗುವುದು ಎಂದರು.

ಈ ಸಂದರ್ಭ ಸವಣೂರು ಗ್ರಾ.ಪಂ.ಸದಸ್ಯ ಪ್ರಕಾಶ್ ಕುದ್ಮನಮಜಲು, ಸ್ಥಳೀಯರಾದ ತೀರ್ಥರಾಮ ಕೆಡೆಂಜಿ,ಬೆಳಿಯಪ್ಪ ಗೌಡ ಚೌಕಿಮಠ ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

8 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

11 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

12 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

13 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago