Advertisement
ಸುದ್ದಿಗಳು

ಪುತ್ತೂರು ಎಪಿಎಂಸಿ ರೈಲ್ವೇ ಅಂಡರ್‌ಪಾಸ್ ಕಾಮಗಾರಿಗೆ ಮೂಲ ಸೌಕರ್ಯ ನಿಧಿಯಿಂದ ಅನುದಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆಗೆ ಮನವಿ

Share

ಸವಣೂರು : ಎಪಿಎಂಸಿ ರೈಲ್ವೇ ಅಂಡರ್‌ಪಾಸ್ ಕಾಮಗಾರಿಗೆ ಮೂಲ ಸೌಕರ್ಯ ನಿಽಯಿಂದ ಅನುದಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಚಾರ್ವಾಕದ ಅವರ ಮನೆಯಲ್ಲಿ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಮನವಿ ಸಲ್ಲಿಸಿದರು.

ಪುತ್ತೂರು ಎಪಿಎಂಸಿ ರಸ್ತೆಯಲ್ಲಿ ರೈಲ್ವೇ ಅಂಡರ್‌ಪಾಸ್ ನಿರ್ಮಾಣಕ್ಕೆ ಈಗಾಗಲೇ 12.70 ಕೋಟಿಯ ಕ್ರಿಯಾಯೋಜನೆ ತಯಾರಿಸಲಾಗಿದ್ದು, ರೈಲ್ವೇ ಇಲಾಖೆ ಹಾಗೂ ಎಪಿಎಂಸಿ 50:50 ಯಂತೆ ಅನುದಾನ ಭರಿಸುವ ಕುರಿತು ಈಗಾಗಲೇ ಅಂದಾಜು ಪಟ್ಟಿ ಮಾಡಲಾಗಿದೆ. ಇದರಿಂದಾಗಿ ರೈಲ್ವೇ ಇಲಾಖೆ 6.35 ಕೋಟಿ ವೆಚ್ಚ ನೀಡಲಿದ್ದು,ಉಳಿದ 6.35 ಕೋಟಿ ರೂಗಳನ್ನು ಎಪಿಎಂಸಿ ಭರಿಸಬೇಕಾಗಿದೆ. ಈ ಕುರಿತು ಈಗಾಗಲೇ ಎಪಿಎಂಸಿ ವತಿಯಿಂದ ಪುತ್ತೂರು ನಗರ ಸಭೆ ,ಶಾಸಕರಿಗೆ,ಸಂಸದರಿಗೆ ಮನವಿ ಮಾಡಲಾಗಿದೆ.ಇದಕ್ಕಾಗಿ ಸರಕಾರದ ಮೂಲ ಸೌಕರ್ಯ ನಿಧಿಯಿಂದ ರೂ 5 ಕೋಟಿ ಅನುದಾನ ನೀಡುವಂತೆ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅವರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿದರು.

ಅಲ್ಲದೆ ಕಾಮಗಾರಿ ತ್ವರಿತವಾಗಿ ಆರಂಭಿಸಲು ರೈಲ್ವೇ ಇಲಾಖೆಯ ಡಿ.ಆರ್.ಎಂ ಅಪರ್ಣಾ ಗಾರ್ಗ್ ಅವರಿಗೆ ಶೋಭಾ ಕರಂದ್ಲಾಜೆ ಅವರು ದೂರವಾಣಿ ಮೂಲಕ ತಿಳಿಸಿದರು.

ಮರಳು ಸಮಸ್ಯೆ ಪರಿಹಾರಕ್ಕೆ ಸಭೆ:  ಅಲ್ಲದೆ ಸರಕಾರದ ಮರಳು ನೀತಿಯಿಂದ ಜನತೆಗೆ ಸಮಸ್ಯೆಯಾಗಿದೆ.ಮನೆ ಹಾಗೂ ಯಾವುದೇ ಕಾಮಗಾರಿ ನಡೆಸಲು ಸಾಧ್ಯವಾಗದ ಸ್ಥಿತಿ ಇದೆ. ನಾನ್ ಸಿಆರ್‌ಝೆಡ್ ನವರಿಗೂ ಮರಳು ತೆಗೆಯಲು ಅವಕಾಶ ನೀಡುವ ಕುರಿತು ಸಚಿವರೊಂದಿಗೆ ಸಭೆ ನಡೆಸುವಂತೆಯೂ ಸಂಸದರಿಗೆ ದಿನೇಶ್ ಮೆದು ಮನವಿಮಾಡಿದರು.

ಪ್ರತಿಕ್ರಿಯೆ ನೀಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು ದ.ಕ.ಸಂಸದ ನಳಿನ್ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ಜತೆಗೂಡಿ ಮುಖ್ಯಮಂತ್ರಿ ಹಾಗೂ ಗಣಿ,ಭೂ ವಿಜ್ಞಾನ ಇಲಾಖೆಯ ಸಚಿವರ ಜತೆ ಸಭೆ ನಡೆಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು .ಮರಳು ಸಮಸ್ಯೆ ಸರಪಡಿಸಲು ಶ್ರಮಿಸಲಾಗುವುದು ಎಂದರು.

ಈ ಸಂದರ್ಭ ಸವಣೂರು ಗ್ರಾ.ಪಂ.ಸದಸ್ಯ ಪ್ರಕಾಶ್ ಕುದ್ಮನಮಜಲು, ಸ್ಥಳೀಯರಾದ ತೀರ್ಥರಾಮ ಕೆಡೆಂಜಿ,ಬೆಳಿಯಪ್ಪ ಗೌಡ ಚೌಕಿಮಠ ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

3 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

3 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago