(ಸಾಂದರ್ಭಿಕ ಚಿತ್ರ)
ಪುತ್ತೂರು: ತಾಲೂಕಿನ ಕುರಿಯ ಗ್ರಾಮದ ಹೊಸಮಾರು ಅಜಲಾಡಿ ಎಂಬಲ್ಲಿ ಕೊಗ್ಗು ಸಾಹೇಬ್(60) ಹಾಗೂ ಅವರ ಮೊಮ್ಮಗಳು ಶಾಲಾ ವಿದ್ಯಾರ್ಥಿನಿ ಸಮಿಹಾ(16) ಕೊಲೆಯಾಗಿದ್ದಾರೆ. ಕೊಗ್ಗು ಸಾಹೇಬ್ ಅವರ ಪತ್ನಿ ಖದೀಜಾ(55) ಗಂಭೀರ ಗಾಯಗೊಂಡಿದ್ದಾರೆ.ಕೊಲೆಗೆ ಕಾರಣ ತಿಳಿದುಬಂದಿಲ್ಲ. ಕೊಗ್ಗು ಸಾಹೇಬ್ ಅವರ ಪುತ್ರ ರಝಾಕ್ ಅವರು ಬೆಳಿಗ್ಗೆ ಹೋಗಿದ್ದಾಗ ಮೂವರು ರಕ್ತಸಿಕ್ತವಾಗಿ ಬಿದ್ದಿರುವುದು ಕಂಡುಬಂದಿದೆ. ಸಂಪ್ಯ ಠಾಣಾ ಎಸ್ಐ ಸಕ್ತಿವೇಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಮನೆಯಲ್ಲಿ 3 ಮಂದಿ ಮಾತ್ರವೇ ಇದ್ದು ಕೊಗ್ಗು ಸಾಹೇಬ್ ಅವರು ಒಬ್ಬ ಪುತ್ರ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದು. ಅವರು ಬೆಳಗ್ಗೆ ಹೊಸಮಾರು ಅಜಲಾಡಿಯ ಮನೆಗೆ ಬಂದಾಗ ಕೊಲೆಯ ಮಾಹಿತಿ ಸಿಕ್ಕಿದ್ದು ತಕ್ಷಣವೇ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…