ಪುತ್ತೂರು: ಮಹಾತೋಬಾರ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯುವ 27 ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿಯಾಗಿ ಕರೆಮುಹೂರ್ತವನ್ನು ಕಂಬಳ ಸಮಿತಿಯ ಸಂಚಾಲಕರಾದ ಮಹಾಲಿಂಗೇಶ್ವರ ದೇವಾಲಯದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎನ್.ಸುಧಾಕರ ಶೆಟ್ಟಿಯವರು ನೆರವೇರಿಸಿದರು.
ಬಳಿಕ ಮಾತನಾಡಿದ ಸುಧಾಕರ ಶೆಟ್ಟಿಯವರು ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಕೋಟಿ ಚೆನ್ನಯ ಕಂಬಳವು ಬಾರಿ ಅದ್ದೂರಿಯಾಗಿ ಮತ್ತು ಶಿಸ್ತುಬದ್ದವಾಗಿ ನೆರವೆರುತ್ತಾ ಬಂದಿದ್ದು, ಅಂತೆಯೇ ಈ ಬಾರಿಯೂ ದೈವದೇವರ ಅನುಗ್ರಹದಿಂದ ಅತ್ಯಂತ ವೈಭವಪೂರ್ವಕವಾಗಿ ನೆರವೇರಲಿದೆ ಎಂದರು.
ಕರೆಮುಹೂರ್ತಕ್ಕೂ ಮುನ್ನ ಮಹತೋಬಾರ ಮಹಾಲಿಂಗೇಶ್ವರ ದೇವಸ್ಥಾನದ ಮೂಲ ನಾಗದೇವರ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ, ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಸಮಿತಿಯ ಪದಾಧಿಕಾರಿಗಳಾದ ಸುದೇಶ್ ಕುಮಾರ್ ಚಿಕ್ಕಪುತ್ತೂರು, ರೋಶನ್ ರೈ ಬನ್ನೂರು, ಸುದೀರ್ ಶೆಟ್ಟಿ ನೆಹರು ನಗರ, ಉಮೇಶ್ ಕರ್ಕೇರಾ, ಜಿನ್ನಪ್ಪ ಪೂಜಾರಿ ಉಪಸ್ಥಿತರಿದ್ದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…