ಪುತ್ತೂರು: ಮಹಾತೋಬಾರ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯುವ 27 ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿಯಾಗಿ ಕರೆಮುಹೂರ್ತವನ್ನು ಕಂಬಳ ಸಮಿತಿಯ ಸಂಚಾಲಕರಾದ ಮಹಾಲಿಂಗೇಶ್ವರ ದೇವಾಲಯದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎನ್.ಸುಧಾಕರ ಶೆಟ್ಟಿಯವರು ನೆರವೇರಿಸಿದರು.
ಬಳಿಕ ಮಾತನಾಡಿದ ಸುಧಾಕರ ಶೆಟ್ಟಿಯವರು ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಕೋಟಿ ಚೆನ್ನಯ ಕಂಬಳವು ಬಾರಿ ಅದ್ದೂರಿಯಾಗಿ ಮತ್ತು ಶಿಸ್ತುಬದ್ದವಾಗಿ ನೆರವೆರುತ್ತಾ ಬಂದಿದ್ದು, ಅಂತೆಯೇ ಈ ಬಾರಿಯೂ ದೈವದೇವರ ಅನುಗ್ರಹದಿಂದ ಅತ್ಯಂತ ವೈಭವಪೂರ್ವಕವಾಗಿ ನೆರವೇರಲಿದೆ ಎಂದರು.
ಕರೆಮುಹೂರ್ತಕ್ಕೂ ಮುನ್ನ ಮಹತೋಬಾರ ಮಹಾಲಿಂಗೇಶ್ವರ ದೇವಸ್ಥಾನದ ಮೂಲ ನಾಗದೇವರ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ, ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಸಮಿತಿಯ ಪದಾಧಿಕಾರಿಗಳಾದ ಸುದೇಶ್ ಕುಮಾರ್ ಚಿಕ್ಕಪುತ್ತೂರು, ರೋಶನ್ ರೈ ಬನ್ನೂರು, ಸುದೀರ್ ಶೆಟ್ಟಿ ನೆಹರು ನಗರ, ಉಮೇಶ್ ಕರ್ಕೇರಾ, ಜಿನ್ನಪ್ಪ ಪೂಜಾರಿ ಉಪಸ್ಥಿತರಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…