ಪುತ್ತೂರು: ಮಹಾತೋಬಾರ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯುವ 27 ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿಯಾಗಿ ಕರೆಮುಹೂರ್ತವನ್ನು ಕಂಬಳ ಸಮಿತಿಯ ಸಂಚಾಲಕರಾದ ಮಹಾಲಿಂಗೇಶ್ವರ ದೇವಾಲಯದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎನ್.ಸುಧಾಕರ ಶೆಟ್ಟಿಯವರು ನೆರವೇರಿಸಿದರು.
ಬಳಿಕ ಮಾತನಾಡಿದ ಸುಧಾಕರ ಶೆಟ್ಟಿಯವರು ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಕೋಟಿ ಚೆನ್ನಯ ಕಂಬಳವು ಬಾರಿ ಅದ್ದೂರಿಯಾಗಿ ಮತ್ತು ಶಿಸ್ತುಬದ್ದವಾಗಿ ನೆರವೆರುತ್ತಾ ಬಂದಿದ್ದು, ಅಂತೆಯೇ ಈ ಬಾರಿಯೂ ದೈವದೇವರ ಅನುಗ್ರಹದಿಂದ ಅತ್ಯಂತ ವೈಭವಪೂರ್ವಕವಾಗಿ ನೆರವೇರಲಿದೆ ಎಂದರು.
ಕರೆಮುಹೂರ್ತಕ್ಕೂ ಮುನ್ನ ಮಹತೋಬಾರ ಮಹಾಲಿಂಗೇಶ್ವರ ದೇವಸ್ಥಾನದ ಮೂಲ ನಾಗದೇವರ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ, ಕೋಶಾಧಿಕಾರಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ, ಸಮಿತಿಯ ಪದಾಧಿಕಾರಿಗಳಾದ ಸುದೇಶ್ ಕುಮಾರ್ ಚಿಕ್ಕಪುತ್ತೂರು, ರೋಶನ್ ರೈ ಬನ್ನೂರು, ಸುದೀರ್ ಶೆಟ್ಟಿ ನೆಹರು ನಗರ, ಉಮೇಶ್ ಕರ್ಕೇರಾ, ಜಿನ್ನಪ್ಪ ಪೂಜಾರಿ ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…