ಸುದ್ದಿಗಳು

ಪುತ್ತೂರು : ಕ್ಯಾನ್ಸರ್ ನಿಂದ ಬಳಲುತ್ತಿರುವ ಬಾಲಕಿಗೆ ಸಹಾಯ ಬೇಕಾಗಿದೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು : ಎಲ್ಲಾ ಮಕ್ಕಳಂತೆ ಶಾಲೆಗೆ ಹೋಗುತ್ತಾ ನಕ್ಕು ನಲಿಯುತ್ತಾ ಸಂತೋಷವಾಗಿರಬೇಕಾಗಿದ್ದ ಪುಟ್ಟ ಬಾಲಕಿಯೊಬ್ಬಳು ತನಗೆ ಬಾಧಿಸಿರುವ  ಕಾಯಿಲೆಯಿಂದ ನರಳುತ್ತಿದ್ದು, ಆಕೆಯ ಚಿಕಿತ್ಸೆಯ ವೆಚ್ಚ ಭರಿಸಲಾಗದ ಬಡ ಹೆತ್ತವರು ಬಾಲಕಿಯ ಚಿಕಿತ್ಸೆಗಾಗಿ ಸಮಾಜದ ಸಹಾಯ ಹಸ್ತ ಯಾಚಿಸಿದ್ದಾರೆ. ಬಾಲಕಿಯ ಚಿಕಿತ್ಸೆಗೆ ಸಹೃದಯಿ ದಾನಿಗಳು ಮುಂದಾದರೆ ಈ ಬಾಲಕಿಯ ಬದುಕು ಹಸನಾಗಬಹುದು.

Advertisement
Advertisement

ಪುತ್ತೂರು ತಾಲೂಕಿನ ಕುಂಬ್ರ ನಿವಾಸಿ ಇಮ್ರಾನ್ ಎಂಬವರ ಪುತ್ರಿ ಫಾತಿಮತ್ ಅಮ್ನಾ ಕ್ಯಾನ್ಸರ್ ಪೀಡಿತೆಯಾಗಿ ಬಳಲುತ್ತಿರುವ ಬಾಲಕಿ. ನಡೆದಾಡಲು ಕೂಡ ಅಸಾಧ್ಯ ಸ್ಥಿತಿಯಲ್ಲಿರುವ ಆಕೆ ಹಾಸಿಗೆ ಹಿಡಿದ ಸ್ಥಿತಿಯಲ್ಲಿದ್ದಾಳೆ.

ಕುಂಬ್ರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಕಲಿಯುತ್ತಿದ್ದ ಆಕೆಗೆ 5 ತಿಂಗಳ ಹಿಂದೆ ಶಾಲೆಗೆ ತೆರಳುತ್ತಿದ್ದ ವೇಳೆ ದಿಢೀರ್ ಆಗಿ ಕಾಲುನೋವು ಆರಂಭಗೊಂಡಿತ್ತು. ಕಾಲು ನೋವಿನ ಜೊತೆಗೆ ಜ್ವರವೂ ಕಾಣಿಸಿಕೊಂಡಿತ್ತು. ಆರಂಭದಲ್ಲಿ ಜ್ವರದಿಂದ ಕಾಲು ನೋವು ಬಂದಿರಬಹುದು ಎಂದು ವೈದ್ಯರು ತಿಳಿಸಿದ್ದರು. ಆದರೆ ಜ್ವರ ಕಡಿಮೆಯಾದರೂ ಕಾಲು ನೋವು ಕಡಿಮೆಯಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆಕೆಯ ಕಾಲುಗಳಲ್ಲಿ ಕ್ಯಾನ್ಸರ್ ರೋಗ ಲಕ್ಷಣಗಳಿರುವ ಬಗ್ಗೆ ವೈದ್ಯರು ತಿಳಿಸಿದ್ದರು.

ಫಾತಿಮತ್ ಅಮ್ನಾಳ ತಂದೆ ಇಮ್ರಾನ್ ಅವರು ಬಡವರು.  ಬೀಡಿ ಸುತ್ತಿ ಮಕ್ಕಳನ್ನು ಸಾಕುತ್ತಿರುವ ತಾಯಿಯೇ ಈ ಕುಟುಂಬದ ಆಧಾರಸ್ಥಂಭ. ಎಳೆಯ ಪ್ರಾಯದಲ್ಲೇ ಮಗಳು ಹಾಸಿಗೆ ಹಿಡಿಯುವ ಸ್ಥಿತಿ ಬಂದಿರುವುದು ಹೆತ್ತವರನ್ನು ನಿತ್ಯ ಕಣ್ಣೀರಿಡುವಂತೆ ಮಾಡಿದೆ.

Advertisement

ಪೋಷಕರು ಫಾತಿಮತ್ ಅಮ್ನಾಳನ್ನು ಬೆಂಗಳೂರಿನ ಕ್ಯಾನ್ಸರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಸಲಹೆಯನ್ನು ಈಗಾಗಲೇ ಪಡೆದಿದ್ದಾರೆ. ಪೂರ್ತಿ ಚಿಕಿತ್ಸೆಗೆ ರೂ.9 ಲಕ್ಷದಷ್ಟು ಖರ್ಚಾಗಲಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತವನ್ನು ಕ್ರೂಢೀಕರಿಸುವುದು ಹೇಗೆಂಬ ಚಿಂತೆಯಲ್ಲಿರುವ ಬಾಲಕಿಯ ಹೆತ್ತವರು ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ.

ನೆರವಿಗಾಗಿ ಕುಂಬ್ರ ವಿಜಯಾ ಬ್ಯಾಂಕ್ (ಬರೋಡಾ ಬ್ಯಾಂಕ್) ಶಾಖೆಯಲ್ಲಿ ಬಾಲಕಿ ಹೆಸರಿನಲ್ಲಿ ಬ್ಯಾಂಕ್ ಖಾತೆ ಇದೆ. ಸಹಾಯ ಮಾಡಲಿಚ್ಚಿಸುವ ದಾನಿಗಳು ಫಾತಿಮತ್ ಅಮ್ನಾ, ಕುಂಬ್ರ ವಿಜಯಾ ಬ್ಯಾಂಕ್ ಶಾಖೆ ಖಾತೆ ಸಂಖ್ಯೆ124201111003564 ಐಎಫ್‍ಸಿ ಕೋಡ್ ವಿಐಜೆಬಿ-0001242 ಗೆ ಸಹಾಯ ಮಾಡಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ- 9902196832

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 hour ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

9 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

9 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

9 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

9 hours ago