Advertisement
ಸುದ್ದಿಗಳು

ಪುತ್ತೂರು : ಕ್ಯಾನ್ಸರ್ ನಿಂದ ಬಳಲುತ್ತಿರುವ ಬಾಲಕಿಗೆ ಸಹಾಯ ಬೇಕಾಗಿದೆ

Share

ಪುತ್ತೂರು : ಎಲ್ಲಾ ಮಕ್ಕಳಂತೆ ಶಾಲೆಗೆ ಹೋಗುತ್ತಾ ನಕ್ಕು ನಲಿಯುತ್ತಾ ಸಂತೋಷವಾಗಿರಬೇಕಾಗಿದ್ದ ಪುಟ್ಟ ಬಾಲಕಿಯೊಬ್ಬಳು ತನಗೆ ಬಾಧಿಸಿರುವ  ಕಾಯಿಲೆಯಿಂದ ನರಳುತ್ತಿದ್ದು, ಆಕೆಯ ಚಿಕಿತ್ಸೆಯ ವೆಚ್ಚ ಭರಿಸಲಾಗದ ಬಡ ಹೆತ್ತವರು ಬಾಲಕಿಯ ಚಿಕಿತ್ಸೆಗಾಗಿ ಸಮಾಜದ ಸಹಾಯ ಹಸ್ತ ಯಾಚಿಸಿದ್ದಾರೆ. ಬಾಲಕಿಯ ಚಿಕಿತ್ಸೆಗೆ ಸಹೃದಯಿ ದಾನಿಗಳು ಮುಂದಾದರೆ ಈ ಬಾಲಕಿಯ ಬದುಕು ಹಸನಾಗಬಹುದು.

ಪುತ್ತೂರು ತಾಲೂಕಿನ ಕುಂಬ್ರ ನಿವಾಸಿ ಇಮ್ರಾನ್ ಎಂಬವರ ಪುತ್ರಿ ಫಾತಿಮತ್ ಅಮ್ನಾ ಕ್ಯಾನ್ಸರ್ ಪೀಡಿತೆಯಾಗಿ ಬಳಲುತ್ತಿರುವ ಬಾಲಕಿ. ನಡೆದಾಡಲು ಕೂಡ ಅಸಾಧ್ಯ ಸ್ಥಿತಿಯಲ್ಲಿರುವ ಆಕೆ ಹಾಸಿಗೆ ಹಿಡಿದ ಸ್ಥಿತಿಯಲ್ಲಿದ್ದಾಳೆ.

ಕುಂಬ್ರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಕಲಿಯುತ್ತಿದ್ದ ಆಕೆಗೆ 5 ತಿಂಗಳ ಹಿಂದೆ ಶಾಲೆಗೆ ತೆರಳುತ್ತಿದ್ದ ವೇಳೆ ದಿಢೀರ್ ಆಗಿ ಕಾಲುನೋವು ಆರಂಭಗೊಂಡಿತ್ತು. ಕಾಲು ನೋವಿನ ಜೊತೆಗೆ ಜ್ವರವೂ ಕಾಣಿಸಿಕೊಂಡಿತ್ತು. ಆರಂಭದಲ್ಲಿ ಜ್ವರದಿಂದ ಕಾಲು ನೋವು ಬಂದಿರಬಹುದು ಎಂದು ವೈದ್ಯರು ತಿಳಿಸಿದ್ದರು. ಆದರೆ ಜ್ವರ ಕಡಿಮೆಯಾದರೂ ಕಾಲು ನೋವು ಕಡಿಮೆಯಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆಕೆಯ ಕಾಲುಗಳಲ್ಲಿ ಕ್ಯಾನ್ಸರ್ ರೋಗ ಲಕ್ಷಣಗಳಿರುವ ಬಗ್ಗೆ ವೈದ್ಯರು ತಿಳಿಸಿದ್ದರು.

ಫಾತಿಮತ್ ಅಮ್ನಾಳ ತಂದೆ ಇಮ್ರಾನ್ ಅವರು ಬಡವರು.  ಬೀಡಿ ಸುತ್ತಿ ಮಕ್ಕಳನ್ನು ಸಾಕುತ್ತಿರುವ ತಾಯಿಯೇ ಈ ಕುಟುಂಬದ ಆಧಾರಸ್ಥಂಭ. ಎಳೆಯ ಪ್ರಾಯದಲ್ಲೇ ಮಗಳು ಹಾಸಿಗೆ ಹಿಡಿಯುವ ಸ್ಥಿತಿ ಬಂದಿರುವುದು ಹೆತ್ತವರನ್ನು ನಿತ್ಯ ಕಣ್ಣೀರಿಡುವಂತೆ ಮಾಡಿದೆ.

ಪೋಷಕರು ಫಾತಿಮತ್ ಅಮ್ನಾಳನ್ನು ಬೆಂಗಳೂರಿನ ಕ್ಯಾನ್ಸರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಸಲಹೆಯನ್ನು ಈಗಾಗಲೇ ಪಡೆದಿದ್ದಾರೆ. ಪೂರ್ತಿ ಚಿಕಿತ್ಸೆಗೆ ರೂ.9 ಲಕ್ಷದಷ್ಟು ಖರ್ಚಾಗಲಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತವನ್ನು ಕ್ರೂಢೀಕರಿಸುವುದು ಹೇಗೆಂಬ ಚಿಂತೆಯಲ್ಲಿರುವ ಬಾಲಕಿಯ ಹೆತ್ತವರು ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ.

ನೆರವಿಗಾಗಿ ಕುಂಬ್ರ ವಿಜಯಾ ಬ್ಯಾಂಕ್ (ಬರೋಡಾ ಬ್ಯಾಂಕ್) ಶಾಖೆಯಲ್ಲಿ ಬಾಲಕಿ ಹೆಸರಿನಲ್ಲಿ ಬ್ಯಾಂಕ್ ಖಾತೆ ಇದೆ. ಸಹಾಯ ಮಾಡಲಿಚ್ಚಿಸುವ ದಾನಿಗಳು ಫಾತಿಮತ್ ಅಮ್ನಾ, ಕುಂಬ್ರ ವಿಜಯಾ ಬ್ಯಾಂಕ್ ಶಾಖೆ ಖಾತೆ ಸಂಖ್ಯೆ124201111003564 ಐಎಫ್‍ಸಿ ಕೋಡ್ ವಿಐಜೆಬಿ-0001242 ಗೆ ಸಹಾಯ ಮಾಡಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ- 9902196832

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

9 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

20 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

1 day ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

1 day ago