Advertisement
ಸುದ್ದಿಗಳು

ಪುತ್ತೂರು : ಕ್ಯಾನ್ಸರ್ ನಿಂದ ಬಳಲುತ್ತಿರುವ ಬಾಲಕಿಗೆ ಸಹಾಯ ಬೇಕಾಗಿದೆ

Share

ಪುತ್ತೂರು : ಎಲ್ಲಾ ಮಕ್ಕಳಂತೆ ಶಾಲೆಗೆ ಹೋಗುತ್ತಾ ನಕ್ಕು ನಲಿಯುತ್ತಾ ಸಂತೋಷವಾಗಿರಬೇಕಾಗಿದ್ದ ಪುಟ್ಟ ಬಾಲಕಿಯೊಬ್ಬಳು ತನಗೆ ಬಾಧಿಸಿರುವ  ಕಾಯಿಲೆಯಿಂದ ನರಳುತ್ತಿದ್ದು, ಆಕೆಯ ಚಿಕಿತ್ಸೆಯ ವೆಚ್ಚ ಭರಿಸಲಾಗದ ಬಡ ಹೆತ್ತವರು ಬಾಲಕಿಯ ಚಿಕಿತ್ಸೆಗಾಗಿ ಸಮಾಜದ ಸಹಾಯ ಹಸ್ತ ಯಾಚಿಸಿದ್ದಾರೆ. ಬಾಲಕಿಯ ಚಿಕಿತ್ಸೆಗೆ ಸಹೃದಯಿ ದಾನಿಗಳು ಮುಂದಾದರೆ ಈ ಬಾಲಕಿಯ ಬದುಕು ಹಸನಾಗಬಹುದು.

ಪುತ್ತೂರು ತಾಲೂಕಿನ ಕುಂಬ್ರ ನಿವಾಸಿ ಇಮ್ರಾನ್ ಎಂಬವರ ಪುತ್ರಿ ಫಾತಿಮತ್ ಅಮ್ನಾ ಕ್ಯಾನ್ಸರ್ ಪೀಡಿತೆಯಾಗಿ ಬಳಲುತ್ತಿರುವ ಬಾಲಕಿ. ನಡೆದಾಡಲು ಕೂಡ ಅಸಾಧ್ಯ ಸ್ಥಿತಿಯಲ್ಲಿರುವ ಆಕೆ ಹಾಸಿಗೆ ಹಿಡಿದ ಸ್ಥಿತಿಯಲ್ಲಿದ್ದಾಳೆ.

ಕುಂಬ್ರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಕಲಿಯುತ್ತಿದ್ದ ಆಕೆಗೆ 5 ತಿಂಗಳ ಹಿಂದೆ ಶಾಲೆಗೆ ತೆರಳುತ್ತಿದ್ದ ವೇಳೆ ದಿಢೀರ್ ಆಗಿ ಕಾಲುನೋವು ಆರಂಭಗೊಂಡಿತ್ತು. ಕಾಲು ನೋವಿನ ಜೊತೆಗೆ ಜ್ವರವೂ ಕಾಣಿಸಿಕೊಂಡಿತ್ತು. ಆರಂಭದಲ್ಲಿ ಜ್ವರದಿಂದ ಕಾಲು ನೋವು ಬಂದಿರಬಹುದು ಎಂದು ವೈದ್ಯರು ತಿಳಿಸಿದ್ದರು. ಆದರೆ ಜ್ವರ ಕಡಿಮೆಯಾದರೂ ಕಾಲು ನೋವು ಕಡಿಮೆಯಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆಕೆಯ ಕಾಲುಗಳಲ್ಲಿ ಕ್ಯಾನ್ಸರ್ ರೋಗ ಲಕ್ಷಣಗಳಿರುವ ಬಗ್ಗೆ ವೈದ್ಯರು ತಿಳಿಸಿದ್ದರು.

ಫಾತಿಮತ್ ಅಮ್ನಾಳ ತಂದೆ ಇಮ್ರಾನ್ ಅವರು ಬಡವರು.  ಬೀಡಿ ಸುತ್ತಿ ಮಕ್ಕಳನ್ನು ಸಾಕುತ್ತಿರುವ ತಾಯಿಯೇ ಈ ಕುಟುಂಬದ ಆಧಾರಸ್ಥಂಭ. ಎಳೆಯ ಪ್ರಾಯದಲ್ಲೇ ಮಗಳು ಹಾಸಿಗೆ ಹಿಡಿಯುವ ಸ್ಥಿತಿ ಬಂದಿರುವುದು ಹೆತ್ತವರನ್ನು ನಿತ್ಯ ಕಣ್ಣೀರಿಡುವಂತೆ ಮಾಡಿದೆ.

ಪೋಷಕರು ಫಾತಿಮತ್ ಅಮ್ನಾಳನ್ನು ಬೆಂಗಳೂರಿನ ಕ್ಯಾನ್ಸರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಸಲಹೆಯನ್ನು ಈಗಾಗಲೇ ಪಡೆದಿದ್ದಾರೆ. ಪೂರ್ತಿ ಚಿಕಿತ್ಸೆಗೆ ರೂ.9 ಲಕ್ಷದಷ್ಟು ಖರ್ಚಾಗಲಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತವನ್ನು ಕ್ರೂಢೀಕರಿಸುವುದು ಹೇಗೆಂಬ ಚಿಂತೆಯಲ್ಲಿರುವ ಬಾಲಕಿಯ ಹೆತ್ತವರು ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ.

ನೆರವಿಗಾಗಿ ಕುಂಬ್ರ ವಿಜಯಾ ಬ್ಯಾಂಕ್ (ಬರೋಡಾ ಬ್ಯಾಂಕ್) ಶಾಖೆಯಲ್ಲಿ ಬಾಲಕಿ ಹೆಸರಿನಲ್ಲಿ ಬ್ಯಾಂಕ್ ಖಾತೆ ಇದೆ. ಸಹಾಯ ಮಾಡಲಿಚ್ಚಿಸುವ ದಾನಿಗಳು ಫಾತಿಮತ್ ಅಮ್ನಾ, ಕುಂಬ್ರ ವಿಜಯಾ ಬ್ಯಾಂಕ್ ಶಾಖೆ ಖಾತೆ ಸಂಖ್ಯೆ124201111003564 ಐಎಫ್‍ಸಿ ಕೋಡ್ ವಿಐಜೆಬಿ-0001242 ಗೆ ಸಹಾಯ ಮಾಡಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ- 9902196832

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

8 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

17 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

17 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

1 day ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago