Advertisement
ಜಿಲ್ಲೆ

ಪುತ್ತೂರು ‘ಗೋಪಣ್ಣ’ ನೆನಪಿನ ಗೌರವಕ್ಕೆ ಪಾವಲಕೋಡಿ ಗಣಪತಿ ಭಟ್ ಆಯ್ಕೆ

Share

ಪುತ್ತೂರು: ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸಂಸ್ಮರಣೆ ಕಾರ್ಯಕ್ರಮವು 2019 ಜೂನ್ 30 ರವಿವಾರದಂದು ಅಪರಾಹ್ನ ಗಂಟೆ 2ಕ್ಕೆ ಜರುಗಲಿದೆ.

ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ಗೃಹದಲ್ಲಿ ಸಂಪನ್ನವಾಗುವ ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಅರ್ಥದಾರಿ, ನಿವೃತ್ತ ಅಧ್ಯಾಪಕ ಪಾವಲಕೋಡಿ ಗಣಪತಿ ಭಟ್ಟರಿಗೆ ‘ಗೋಪಣ್ಣ ನೆನಪಿನ ಗೌರವ’ ಪ್ರಧಾನ ಮಾಡಲಾಗುವುದು. ಸಮಾರಂಭದ ಬಳಿಕ ತಾಳಮದ್ದಳೆ ನಡೆಯಲಿದೆ.
ಪಾವಲಕೋಡಿ ಗಣಪತಿ ಭಟ್ಟರು ನಿವೃತ್ತ ಅಧ್ಯಾಪಕರು. ಕನ್ಯಾನ, ಉಪ್ಪಿನಂಗಡಿ, ನೆಲ್ಲಿಕಟ್ಟೆ ಶಾಲೆ ಮತ್ತು ಕಾಣಿಯೂರು ಜ್ಯೂನಿಯರ್ ಕಾಲೇಜುಗಳಲ್ಲಿ ಶಿಕ್ಷಕ ವೃತ್ತಿ. ಶಿಸ್ತಿನ ಅಧ್ಯಾಪಕನೆನ್ನುವ ನೆಗಳ್ತೆ. ಶಿಕ್ಷೆಯೂ ಶಿಕ್ಷಣವೂ ಜತೆಜತೆಯಲ್ಲಿರುವಾಗ ರೂಪುಗೊಂಡ ವಿದ್ಯಾರ್ಥಿ ಸಮೂಹ ಪಾವಲಕೋಡಿಯವರನ್ನು ಈಗಲೂ ಗೌರವಿಸುತ್ತಾರೆ.

ಇವರು ಯಕ್ಷಗಾನ ಅರ್ಥದಾರಿ, ವೇಷಧಾರಿ. ಪುತ್ತೂರು ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಲ್ಲಿ ಬಹುಕಾಲ ಸಕ್ರಿಯರು. ಬಹುತೇಕ ಖಳಪಾತ್ರಗಳ ಸುಲಲಿತ ನಿರ್ವಹಣೆ. ಶುಂಭ, ಚಂಡ-ಮುಂಡ, ಯಮ, ಕಂಸ, ವೀರಭದ್ರ.. ಮೊದಲಾದ ಪಾತ್ರಗಳ ಸ್ವ-ನಿರ್ಮಿತ ವಿನ್ಯಾಸ. ನಿಯಮಿತವಾದ ಓದುವಿಕೆ. ಒಂದು ಕಾಲಘಟ್ಟದ ಯಕ್ಷಬದುಕಿಗೆ ಪಾವಲಕೋಡಿ ಗಣಪತಿ ಭಟ್ಟರು ಇತಿಹಾಸವಾಗಿ ನಮ್ಮೊಡನಿದ್ದಾರೆ. ಅವರ ದೀರ್ಘ ಕಲಾಯಾನಕ್ಕೆ ಈಗ ಪುತ್ತೂರು ಗೋಪಣ್ಣ ನೆನಪಿನ ಗೌರವ.

ಕಳೆದ ವರುಷಗಳಲ್ಲಿ ಗೋಪಣ್ಣ ನೆನಪಿನ ಗೌರವವನ್ನು ದೇವದರ್ಜಿ ಅಳಕೆ ನಾರಾಯಣ ರಾವ್, ಮದ್ಲೆಗಾರ ವೆಂಕಟೇಶ ಉಳಿತ್ತಾಯರು, ಜ್ಯೋತಿಷಿ ಗಣಪತಿ ಭಟ್ಟರಿಗೆ ಪ್ರದಾನ ಮಾಡಲಾಗಿತ್ತು. ಗೋಪಣ್ಣ ಅವರ ಚಿರಂಜೀವಿ ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಕುಟುಂಬ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

5 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

5 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

14 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

14 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

15 hours ago