Advertisement
ಜಿಲ್ಲೆ

ಪುತ್ತೂರು ‘ಗೋಪಣ್ಣ’ ನೆನಪಿನ ಗೌರವಕ್ಕೆ ಪಾವಲಕೋಡಿ ಗಣಪತಿ ಭಟ್ ಆಯ್ಕೆ

Share

ಪುತ್ತೂರು: ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸಂಸ್ಮರಣೆ ಕಾರ್ಯಕ್ರಮವು 2019 ಜೂನ್ 30 ರವಿವಾರದಂದು ಅಪರಾಹ್ನ ಗಂಟೆ 2ಕ್ಕೆ ಜರುಗಲಿದೆ.

ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ಗೃಹದಲ್ಲಿ ಸಂಪನ್ನವಾಗುವ ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಅರ್ಥದಾರಿ, ನಿವೃತ್ತ ಅಧ್ಯಾಪಕ ಪಾವಲಕೋಡಿ ಗಣಪತಿ ಭಟ್ಟರಿಗೆ ‘ಗೋಪಣ್ಣ ನೆನಪಿನ ಗೌರವ’ ಪ್ರಧಾನ ಮಾಡಲಾಗುವುದು. ಸಮಾರಂಭದ ಬಳಿಕ ತಾಳಮದ್ದಳೆ ನಡೆಯಲಿದೆ.
ಪಾವಲಕೋಡಿ ಗಣಪತಿ ಭಟ್ಟರು ನಿವೃತ್ತ ಅಧ್ಯಾಪಕರು. ಕನ್ಯಾನ, ಉಪ್ಪಿನಂಗಡಿ, ನೆಲ್ಲಿಕಟ್ಟೆ ಶಾಲೆ ಮತ್ತು ಕಾಣಿಯೂರು ಜ್ಯೂನಿಯರ್ ಕಾಲೇಜುಗಳಲ್ಲಿ ಶಿಕ್ಷಕ ವೃತ್ತಿ. ಶಿಸ್ತಿನ ಅಧ್ಯಾಪಕನೆನ್ನುವ ನೆಗಳ್ತೆ. ಶಿಕ್ಷೆಯೂ ಶಿಕ್ಷಣವೂ ಜತೆಜತೆಯಲ್ಲಿರುವಾಗ ರೂಪುಗೊಂಡ ವಿದ್ಯಾರ್ಥಿ ಸಮೂಹ ಪಾವಲಕೋಡಿಯವರನ್ನು ಈಗಲೂ ಗೌರವಿಸುತ್ತಾರೆ.

ಇವರು ಯಕ್ಷಗಾನ ಅರ್ಥದಾರಿ, ವೇಷಧಾರಿ. ಪುತ್ತೂರು ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಲ್ಲಿ ಬಹುಕಾಲ ಸಕ್ರಿಯರು. ಬಹುತೇಕ ಖಳಪಾತ್ರಗಳ ಸುಲಲಿತ ನಿರ್ವಹಣೆ. ಶುಂಭ, ಚಂಡ-ಮುಂಡ, ಯಮ, ಕಂಸ, ವೀರಭದ್ರ.. ಮೊದಲಾದ ಪಾತ್ರಗಳ ಸ್ವ-ನಿರ್ಮಿತ ವಿನ್ಯಾಸ. ನಿಯಮಿತವಾದ ಓದುವಿಕೆ. ಒಂದು ಕಾಲಘಟ್ಟದ ಯಕ್ಷಬದುಕಿಗೆ ಪಾವಲಕೋಡಿ ಗಣಪತಿ ಭಟ್ಟರು ಇತಿಹಾಸವಾಗಿ ನಮ್ಮೊಡನಿದ್ದಾರೆ. ಅವರ ದೀರ್ಘ ಕಲಾಯಾನಕ್ಕೆ ಈಗ ಪುತ್ತೂರು ಗೋಪಣ್ಣ ನೆನಪಿನ ಗೌರವ.

ಕಳೆದ ವರುಷಗಳಲ್ಲಿ ಗೋಪಣ್ಣ ನೆನಪಿನ ಗೌರವವನ್ನು ದೇವದರ್ಜಿ ಅಳಕೆ ನಾರಾಯಣ ರಾವ್, ಮದ್ಲೆಗಾರ ವೆಂಕಟೇಶ ಉಳಿತ್ತಾಯರು, ಜ್ಯೋತಿಷಿ ಗಣಪತಿ ಭಟ್ಟರಿಗೆ ಪ್ರದಾನ ಮಾಡಲಾಗಿತ್ತು. ಗೋಪಣ್ಣ ಅವರ ಚಿರಂಜೀವಿ ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಕುಟುಂಬ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

2 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

7 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago