ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೆಯ ಪ್ರಯುಕ್ತ ಬುಧವಾರ ರಾತ್ರಿ ಬ್ರಹ್ಮರಥೋತ್ಸವ ಹಾಗೂ ಪುತ್ತೂರು ಬೆಡಿ ಪ್ರದರ್ಶನ ನಡೆಯಿತು. ಲಕ್ಷಾಂತರ ಭಕ್ತಾದಿಗಳು ಈ ಕ್ಷಣಕ್ಕೆ ಸಾಕ್ಷಿಯಾದರು.
ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೆಯ ಅಂಗವಾಗಿ ಮಂಗಳವಾರ ರಾತ್ರಿ ಶ್ರೀ ದೇವಾಲಯದ ಹೊರಾಂಗಣದಲ್ಲಿ ಶ್ರೀ ಉಳ್ಳಾಲ್ತಿ ದೈವ ಮತ್ತು ಶ್ರೀ ಮಹಾಲಿಂಗೇಶ್ವರ ದೇವರ ಸಾಂಪ್ರದಾಯಿಕ ಭೇಟಿ ನಡೆಯಿತು.
ಬುಧವಾರ ಶ್ರೀ ದೇವಾಲಯದ ಒಳಾಂಗಣದಲ್ಲಿ ಬೆಳಗ್ಗೆ ದೇವಾಲಯದ ಆಚಾರ್ಯ ಬ್ರಹ್ಮಶ್ರೀ ಕುಂಟಾರು ಶ್ರೀಧರ ತಂತ್ರಿಗಳ ಧಾರ್ಮಿಕ ನೇತೃತ್ವದಲ್ಲಿ ಉತ್ಸವ ನಡೆಯಿತು. ಬುಧವಾರದ ಉತ್ಸವದಲ್ಲಿ ಮಾಮೂಲಿ ಸುತ್ತುಗಳಲ್ಲದೆ ಶಂಖಸುತ್ತು, ಭಜನೆ ಸುತ್ತು ಮತ್ತು ಹೆಚ್ಚುವರಿ ವಾದ್ಯ ಸುತ್ತುಗಳು ಇರುತ್ತವೆ. ಈ ಉತ್ಸವ ಸಂದರ್ಭ ವಸಂತ ಕಟ್ಟೆ ಪೂಜೆ ನಡೆಯುತ್ತದೆ. ದರ್ಶನ ಬಲಿ ಸುತ್ತು ನಡೆದ ಬಳಿಕ ಬಟ್ಟಲು ಕಾಣಿಕೆ ಸಮರ್ಪಣೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಶ್ರೀ ದೇವರ ದರ್ಶನ ಬಲಿ ಉತ್ಸವಕ್ಕೆ ಮತ್ತು ಬ್ರಹ್ಮರಥೋತ್ಸವದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ್ದ 15ಸಾವಿರಕ್ಕೂ ಹೆಚ್ಚು ಮಂದಿ ಗುರುವಾರ ಮಧ್ಯಾಹ್ನ ಮಹಾ ಅನ್ನಸಂತರ್ಪಣೆಯಲ್ಲಿ ಅನ್ನಪ್ರಸಾದ ಸ್ವೀಕರಿಸಿದರು.
ದೇವಾಲಯದ ಒಳಾಂಗಣದಲ್ಲಿ ಗೋಪುರದಲ್ಲಿ ಮತ್ತು ನೆಲದಲ್ಲಿ ಕುಳಿತು ದರ್ಶನ ಬಲಿ ಉತ್ಸವವನ್ನು ವೀಕ್ಷಿಸಲು ಬಂದಿದ್ದ ಸಾವಿರಾರು ಮಂದಿ ಭಕ್ತರಿಗೆ ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿಯ ವತಿಯಿಂದ ಮಜ್ಜಿಗೆ ವಿತರಣೆ ನಡೆಯಿತು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…