Advertisement

ಪುತ್ತೂರು ಜಾತ್ರೋತ್ಸವದಲ್ಲಿ ಬ್ರಹ್ಮರಥೋತ್ಸವ, ಪುತ್ತೂರು ಬೆಡಿ

Share

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೆಯ ಪ್ರಯುಕ್ತ ಬುಧವಾರ ರಾತ್ರಿ ಬ್ರಹ್ಮರಥೋತ್ಸವ ಹಾಗೂ ಪುತ್ತೂರು ಬೆಡಿ ಪ್ರದರ್ಶನ ನಡೆಯಿತು. ಲಕ್ಷಾಂತರ ಭಕ್ತಾದಿಗಳು ಈ ಕ್ಷಣಕ್ಕೆ ಸಾಕ್ಷಿಯಾದರು.
ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೆಯ ಅಂಗವಾಗಿ ಮಂಗಳವಾರ ರಾತ್ರಿ ಶ್ರೀ ದೇವಾಲಯದ ಹೊರಾಂಗಣದಲ್ಲಿ ಶ್ರೀ ಉಳ್ಳಾಲ್ತಿ ದೈವ ಮತ್ತು ಶ್ರೀ ಮಹಾಲಿಂಗೇಶ್ವರ ದೇವರ ಸಾಂಪ್ರದಾಯಿಕ ಭೇಟಿ ನಡೆಯಿತು.
ಬುಧವಾರ ಶ್ರೀ ದೇವಾಲಯದ ಒಳಾಂಗಣದಲ್ಲಿ ಬೆಳಗ್ಗೆ ದೇವಾಲಯದ ಆಚಾರ್ಯ ಬ್ರಹ್ಮಶ್ರೀ ಕುಂಟಾರು ಶ್ರೀಧರ ತಂತ್ರಿಗಳ ಧಾರ್ಮಿಕ ನೇತೃತ್ವದಲ್ಲಿ ಉತ್ಸವ ನಡೆಯಿತು. ಬುಧವಾರದ ಉತ್ಸವದಲ್ಲಿ ಮಾಮೂಲಿ ಸುತ್ತುಗಳಲ್ಲದೆ ಶಂಖಸುತ್ತು, ಭಜನೆ ಸುತ್ತು ಮತ್ತು ಹೆಚ್ಚುವರಿ ವಾದ್ಯ ಸುತ್ತುಗಳು ಇರುತ್ತವೆ. ಈ ಉತ್ಸವ ಸಂದರ್ಭ ವಸಂತ ಕಟ್ಟೆ ಪೂಜೆ ನಡೆಯುತ್ತದೆ. ದರ್ಶನ ಬಲಿ ಸುತ್ತು ನಡೆದ ಬಳಿಕ ಬಟ್ಟಲು ಕಾಣಿಕೆ ಸಮರ್ಪಣೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಶ್ರೀ ದೇವರ ದರ್ಶನ ಬಲಿ ಉತ್ಸವಕ್ಕೆ ಮತ್ತು ಬ್ರಹ್ಮರಥೋತ್ಸವದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ್ದ 15ಸಾವಿರಕ್ಕೂ ಹೆಚ್ಚು ಮಂದಿ ಗುರುವಾರ ಮಧ್ಯಾಹ್ನ ಮಹಾ ಅನ್ನಸಂತರ್ಪಣೆಯಲ್ಲಿ ಅನ್ನಪ್ರಸಾದ ಸ್ವೀಕರಿಸಿದರು.
ದೇವಾಲಯದ ಒಳಾಂಗಣದಲ್ಲಿ ಗೋಪುರದಲ್ಲಿ ಮತ್ತು ನೆಲದಲ್ಲಿ ಕುಳಿತು ದರ್ಶನ ಬಲಿ ಉತ್ಸವವನ್ನು ವೀಕ್ಷಿಸಲು ಬಂದಿದ್ದ ಸಾವಿರಾರು ಮಂದಿ ಭಕ್ತರಿಗೆ ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿಯ ವತಿಯಿಂದ ಮಜ್ಜಿಗೆ ವಿತರಣೆ ನಡೆಯಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

11 mins ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

50 mins ago

ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…

1 hour ago

ಇವರು ಎಲ್ಲಾ ಕುಂದುಕೊರತೆಗಳ ನಡುವೆಯೂ ಮತದಾನ ಮಾಡ್ತಾರೆ…! | ಅವರು ಎಲ್ಲಾ ಸೌಕರ್ಯ ಇದ್ದರೂ ಮತದಾನ ಮಾಡಲಾರರು..!

ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…

2 hours ago

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

3 hours ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

3 hours ago