ಸುದ್ದಿಗಳು

ಪುತ್ತೂರು ಜೋಡಿ ಕೊಲೆ ಪ್ರಕರಣ : 24 ಗಂಟೆಯಲ್ಲಿ ಆರೋಪಿಯ ಬಂಧಿಸಿದ ಪೊಲೀಸರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಪುತ್ತೂರು ತಾಲೂಕಿನ ಕುರಿಯ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು  24 ಗಂಟೆಯಲ್ಲಿ ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿರುತ್ತಾರೆ. ಆರೋಪಿಯು ಕುರಿಯ ಗ್ರಾಮದ ಕಟ್ಟತ್ತಾರು ನಿವಾಸಿ ಕರೀಂ ಖಾನ್ ( 29 ವರ್ಷ).

Advertisement
Advertisement
ಕರೀಂ ಖಾನ್

ಆರೋಪಿ ಕರೀಂ ಖಾನ್ ಸೋಮವಾರ ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಶೇಕ್ ಕೊಗ್ಗು ಸಾಹೇಬ್ ಅವರ ಮನೆಗೆ ಕಳ್ಳತನದ ಉದ್ದೇಶದಿಂದ  ಮನೆಯ ಗೋಡೆ ಮತ್ತು ಹಂಚಿನ ನಡುವೆ ನುಸುಳಿ ಒಳ ಪ್ರವೇಶಿಸಿದ್ದು ಕಳ್ಳತನ ನಡೆಸುವ ವೇಳೆ ಮನೆಯ ಸದಸ್ಯರು ಎಚ್ಚರಗೊಂಡಿರುತ್ತಾರೆ ಹೀಗಾಗಿ ಮನೆಯ ಸದಸ್ಯರಿಗೆ ಪರಿಚಿತನಾಗಿದ್ದು ತಾನು ಸಿಕ್ಕಿಹಾಕಿಕೊಳ್ಳುತ್ತೇನೆ ಎಂಬ ಭಯದಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ.ಆರೋಪಿ ಕರೀಂ ಖಾನ್ ಶೇಕ್ ಕೊಗ್ಗು ಸಾಹೇಬ್ ರವರೊಂದಿಗೆ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮನಸ್ತಾಪವನ್ನೂ ಹೊಂದಿದ್ದ ಎಂದೂ ಪೊಲೀಸರಲ್ಲಿ  ಬಾಯಿಬಿಟ್ಟಿದ್ದಾನೆ.

ಕಳ್ಳತನದ ವೇಳೆ ಮನೆಯವರಿಗೆ ಎಚ್ಚರವಾದ್ದು ತಿಳಿದು  ಅಡುಗೆ ಕೋಣೆಯಲ್ಲಿದ್ದ ಕೊಕ್ಕೆ ಕತ್ತಿಯಿಂದ ಮನೆಯಲ್ಲಿದ್ದ ಶೇಕ್ ಕೊಗ್ಗು ಸಾಹೇಬ್ ( 70 ವರ್ಷ), ಶಾಮಿಯಾ ಭಾನು (16 ವರ್ಷ) ಎಂಬವರುಗಳು ಹತ್ಯೆ ನಡೆಸಿದ್ದು, ಖತೀಜಾಬಿ (65 ವರ್ಷ) ಎಂಬವರಿಗೆ ಗಂಭೀರ ಹಲ್ಲೆ ನಡೆಸಿದ್ದ. ಬಳಿಕ ಮನೆಯಲ್ಲಿದ್ದ ಸುಮಾರು 30 ಗ್ರಾಂ ತೂಕದ ಚಿನ್ನಾಭರಣ ಹಾಗೂ 6,000 ರೂಪಾಯಿ ನಗದನ್ನು ಕಳ್ಳತನ ನಡೆಸಿ ಮನೆಯ ಹಿಂಬಾಗಿಲಿನ ಮೂಲಕ ತೆರಳಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪುತ್ತೂರು ಗ್ರಾಮಾಂತರ ಪೊಲೀಸರು ಠಾಣಾ ವ್ಯಾಪ್ತಿಯ ಕುರಿಯ ಗ್ರಾಮದ ಬೀಟ್ ಸಿಬ್ಬಂದಿ ಭೀಮ್ ಶೇನ್ ರವರು ನೀಡಿದ ಸುಳಿವಿನ ಆಧಾರದಲ್ಲಿ ಆರೋಪಿಯನ್ನು ದಬಂಧಿಸಿದ್ದು ತನಿಖೆ ಪ್ರಗತಿಯಲ್ಲಿದೆ.ಆರೋಪಿಯ ಕೈಗೆ ಕೃತ್ಯ ನಡೆಸುವ ವೇಳೆ ಉಂಟಾದ ಘರ್ಷಣೆಯಲ್ಲಿ ಗಾಯವಾಗಿದ್ದು, ಈ ಬಗ್ಗೆ ಚಿಕಿತ್ಸೆ ನೀಡಲಾಗಿರುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ  ನಡೆದ ಈ ಪ್ರಕರಣದ ಆರೋಪಿ ಬಂಧಿಸುವಲ್ಲಿ  ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಯುತ್ತಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 hour ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

8 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

9 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

9 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

9 hours ago